- Advertisement -
- Advertisement -
ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರು ಎಂಬಲ್ಲಿ ಅನ್ಯ ಧರ್ಮದ ಮದುವೆ ಮನೆಯಲ್ಲಿ ಹಿಂದೂಗಳ ಆರಾಧ್ಯ ದೈವ ಸ್ವಾಮೀ ಕೊರಗಜ್ಜನ ವೇಷವನ್ನು ವರನು ಧರಿಸಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರನ್ನು ಮಂಗಲ್ಪಡಿ ನಿವಾಸಿ ಪುತ್ತೂರಿನ ಪಾತಿಮಾ ಡ್ರೆಸ್ ಸೆಂಟರ್ ನ ಮಾಲಕ ಅಹಮದ್ ಮುಜಿತಾಬ (28) ಹಾಗೂ ಬಾಯರ್ ಪದವು ನಿವಾಸಿ ಮೊಯ್ದೀನ್ ಮುನಿಶ್ (19) ಗುರುತಿಸಲಾಗಿದೆ.
ಈ ಬಗ್ಗೆ ವಿಟ್ಲ ದಲ್ಲಿ ಹಿಂ. ಜಾ. ವೇ ಯಿಂದ ಬೃಹತ್ ಪ್ರತಿಭಟನೆ ನಡೆದಿದ್ದು, ಆರೋಪಿಗಳನ್ನು ಬಂಧಿಸದಿದ್ದಲ್ಲಿ ವಿಟ್ಲ ಬಂದ್ ಗೆ ಕರೆ ನೀಡಿದ್ದರು. ಇದೀಗ ವಿಟ್ಲ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
- Advertisement -