ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.18ರಂದು ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಿತು. ಬೆಳಗ್ಗೆ ಗಂಗಾಕಲಶ ಪ್ರತಿಷ್ಠೆ, ಪ್ರತಿಷ್ಠಾ ವಾರ್ಷಿಕೋತ್ಸವ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಾಯಂಕಾಲ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ರಾತ್ರಿ ರಂಗಪೂಜೆ ನಡೆದು ಬಳಿಕ ಪ್ರಸಾದ ವಿತರಣೆ ನಡೆಯಿತು.
ಈ ಸಂದರ್ಭದಲ್ಲಿ ಯಕ್ಷಶ್ರೀ ಹವ್ಯಾಸಿ ಬಳಗ ಪುತ್ತೂರು ಇವರಿಂದ ಯಕ್ಷಗಾನ ತಾಳಮದ್ದಳೆ ನಡೆಯಿತು. ಬಳಿಕ ದೇವಾಲಯದ ವತಿಯಿಂದ ತಂಡದ ಪದಾಧಿಕಾರಿಗಳನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಸುರೇಶ್ ಕೆ.ಎಸ್.ಮುಕ್ಕುಡ, ಗ್ರಾಮಸ್ತರಾದ ರಾಜಾರಾಮ್ ಶೆಟ್ಟಿ ಕೋಲ್ಪೆಗುತ್ತು.
ಪ್ರಫುಲ್ಲ ಚಂದ್ರ ಪಿ.ಜಿ. ಕೋಲ್ಪೆ, ದೇವಸ್ಯ ತಿಮ್ಮಪ್ಪ ಸಪಲ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವಿಜಯಕುಮಾರ ಗೌಡ ಸೂರ್ಯ, ಚಂದ್ರಶೇಖರ ಕಂಬಳಿ ಅರ್ಕೆಚ್ಚರು, ದೇಜಪ್ಪ ಕೋಲ್ಪೆ, ವಿ.ಕೆ.ಕುಟ್ಟಿ ಉರಿಮಜಲು, ಉಷಾ ಮುಂಡ್ರಬೈಲು, ಶಶಿಪ್ರಭ ಮಿತ್ತೂರು ಮೊದಲಾದವರು ಉಪಸ್ಥಿತರಿದ್ದರು. ಊರಪರವೂರ ನೂರಾರು ಭಕ್ತಾಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು