ವಿಟ್ಲ: ಗುಣಶ್ರೀ ವಿದ್ಯಾಲಯ ಕುಳ ಕುಂಡಡ್ಕ ಶಾಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಹಿರಿಯರಾದ ಬಾಲು ನಾಯ್ಕ ಕುಡುವರ ಬೆಟ್ಟು ಇವರು ನೆರವೇರಿಸಿದರು. ನಂತರ ಶಾಲಾ ಮಕ್ಕಳ ಮೆರವಣಿಗೆ ನಡೆಸಲಾಯಿತು.
ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿ ಮಕ್ಕಳ ವಿವಿಧ ಕಾರ್ಯಕ್ರಮಗಳನ್ನು ಶಿಕ್ಷಕಿ ವನಜಾರವರು ನೆರವೇರಿಸಿಕೊಟ್ಟರು. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗೋವಿಂದ ರಾಜ್ ಪೆರುವಾಜೆ ವಕೀಲರು, ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಚಂದ್ರಾವತಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವೇಣುಗೋಪಾಲ ಶೆಟ್ಟಿ, ಮರುವಾಳ ಶಾಲಾ ಸಂಚಾಲಕರು ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಪ್ರಸಾದಿನಿಯವರು ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಗಣ್ಯ ವ್ಯಕ್ತಿಗಳು ವಿವಿಧ ಸ್ಪರ್ಧೆಗಳ ಬಹುಮಾನ ವಿತರಿಸಿದರು. ಶಿಕ್ಷಕಿ ರೇಣುಕಾ ಚೇತನ್ ನಿರೂಪಣೆಗೈದರು. ಶಾಲಾ ಮಕ್ಕಳು ಪೋಷಕರು ಊರ ಮಹನೀಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಶಿಕ್ಷಕ ವೃಂದ ಈ ಕಾರ್ಯಕ್ರಮದಲ್ಲಿ ಸಹಕರಿಸಿದ್ದು ಶಾಲಾ ಶಿಕ್ಷಕಿ ರೇಖಾ ಧನ್ಯವಾದವಿತ್ತು ಕಾರ್ಯಕ್ರಮ ನೇರವೇರಿಸಿಕೊಟ್ಟರು.