Monday, April 29, 2024
spot_imgspot_img
spot_imgspot_img

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ಪ್ರಧಾನ ಕಚೇರಿಯ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ

- Advertisement -G L Acharya panikkar
- Advertisement -

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ಪ್ರಧಾನ ಕಚೇರಿಯ ಆವರಣದಲ್ಲಿ 75 ನೇ ಅಮೃತ ಮಹೋತ್ಸವದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದ್ವಜಾರೋಹಣ ಕಾರ್ಯಕ್ರಮವನ್ನು ಬ್ಯಾಂಕಿನ ನಿರ್ದೇಶಕರಾದ ಮಾಜಿ ಯೋಧ ಬಾಲಕೃಷ್ಣ ಪಿ.ಯಸ್‌ ಇವರು ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಜಗನ್ನಾಥ ಸಾಲಿಯಾನ್, ಹೆಚ್, ಉಪಾಧ್ಯಕ್ಷ ಮೋಹನ್ ಕೆ.ಎಸ್ ಹಾಗೂ ಆಡಳಿತ ಮಂಡಳಿ ಸದಸ್ಯ ಕೃಷ್ಣಕೆ, ಉದಯಕುಮಾರ್.ಎ, ದಯಾನಂದ ಆಳ್ವ, ಗೋವರ್ಧನ್ ಕುಮಾರ್ ಐ, ಸುಂದರ ಡಿ, ದಿವಾಕರ ವಿ, ಜಯಂತಿ.ಹೆಚ್ ರಾವ್ ಹಾಗೂ ಶುಭಲಕ್ಷ್ಮಿ ಇವರು ಉಪಸ್ಥಿತರಿದ್ದರು.

ಬ್ಯಾಂಕಿನ ಪ್ರಭಾರ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಹಾಸ ರಾಜ್ಯ ಡಿ ಇವರು ಕಾರ್ಯಕ್ರಮ ನಿರೂಪಿಸಿದರು. ತುಳಸಿದಾಸ್‌ ಶೆಣೈ ಇವರು ವಂದೇ ಮಾತರಂ ಗೀತೆಯನ್ನು ಹಾಡುವುದರ ಮೂಲಕ ಧ್ವಜವಂದನೆ ಸಲ್ಲಿಸಲಾಯಿತು. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೃಷ್ಣ ಮುರಳಿ ಶ್ಯಾಮ್, ಕೆ ಹಾಗೂ ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

- Advertisement -

Related news

error: Content is protected !!