
ವಿಟ್ಲ: ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ. ಧ್ವಜಾರೋಹಣ ಮತ್ತು ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಶಾಲಾ ವಠಾರದಲ್ಲಿ ನಡೆಯಿತು.

ವಿಟ್ಲಮುಡ್ನೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅಬ್ದುಲ್ ಖಾದರ್ ಹಾಜಿ ಬದ್ರಿಯಾ ರವರು ಧ್ವಜಾರೋಹಣ ನೆರವೇರಿಸಿದರು.
ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶಾಕಿರ್ ಅಳಕೆಮಜಲು ಮಾತನಾಡಿ ಮಕ್ಕಳಿಗೆ ಶಾಲಾ ಮಟ್ಟದಲ್ಲೇ ಜಾತಿ, ಧರ್ಮ, ಭಾಷೆಯ ಭೇದಭಾವವಿಲ್ಲದೇ ನೈಜ ದೇಶಪ್ರೇಮವನ್ನು ಕಲಿಸಿಕೊಡುವಲ್ಲಿ ವಿಶೇಷ ಕಾಳಜಿ ವಹಿಸಬೇಕಿದೆ. ಜನಪ್ರಿಯ ಶಾಲೆಯ ಮುಖ್ಯಸ್ಥರಾದ ಡಾ.ಅಬ್ದುಲ್ ಬಷೀರ್ ರವರು ಉತ್ತಮ ಕಲಿಕೆ ಮಾತ್ರವಲ್ಲದೇ ಇಂತಹ ವಿಚಾರಗಳನ್ನು ಮಕ್ಕಳಿಗೆ ಕಲಿಸಿಕೊಡುವ ಬಗ್ಗೆ ಹೆಚ್ಹು ಒತ್ತು ನೀಡಿದ್ದಾರೆ ಎಂದರು.

ಶಾಲೆಯ ಪ್ರಾಂಶುಪಾಲೆ ಶ್ರೀಮತಿ ಪ್ರಿಯಾ ದುರೈರಾಜ್ ರವರು ಮಕ್ಕಳಿಗೆ ಸ್ವಾತಂತ್ರ್ಯೋತ್ಸವದ ಮಹತ್ವವನ್ನು ಸವಿವರವಾಗಿ ತಿಳಿಸಿದರು.

ವಿದ್ಯಾರ್ಥಿಗಳಿಗೆ ಕ್ವಿಜ್ ಸ್ಪರ್ಧೆ, ನೃತ್ಯ, ದೇಶಭಕ್ತಿ ಗೀತೆ ಹೀಗೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಶಾಲೆಯ ನಿರ್ದೇಶಕ ನೌಶೀನ್ ಬದ್ರಿಯಾ, ಆಡಳಿತ ಅಧಿಕಾರಿ ಸಫ್ವಾನ್ ಪಿಲಿಕಲ್, ರಕ್ಷಕ ಶಿಕ್ಷಕ ಸಂಘದ ಸದಸ್ಯರು, ಪೋಷಕರು, ಶಿಕ್ಷಕರು, ಮತ್ತು ಇತರೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳಾದ ಹಿಬಾ ಮರಿಯಂ ಸ್ವಾಗತಿಸಿ, ವಿದಾದ್ ನೂರೈನ್ ವಂದಿಸಿದರು. ವಿದ್ಯಾರ್ಥಿನಿ ಝಿವಾ ಮತ್ತು ಮುಹಮ್ಮದ್ ಶಹಾನ್ ಕಾರ್ಯಕ್ರಮ ನಿರೂಪಿಸಿದರು.

