- Advertisement -
- Advertisement -
ವಿಟ್ಲ: ಜಾಗದ ವಿಚಾರವಾಗಿ ಹಲವು ಸಮಯದಿಂದ ನಡೆಯುತ್ತಿದ್ದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ವಿಟ್ಲದ ಮಂಗಿಲಪದವು ಬನಾರಿ ಎಂಬಲ್ಲಿ ನಡೆದಿದೆ. ಅಣ್ಣನನ್ನು ಕೊಲೆಗೈದ ಆರೋಪಿ ತಮ್ಮ ಪದ್ಮನಾಭನನ್ನು ಪೊಲೀಸರು ಬಂಧಿಸಿದ್ದಾರೆ.
ಬನಾರಿ ಕೊಡಂಗೆ ನಿವಾಸಿ ಗಣೇಶ್ (53) ಸಾವನ್ನಪ್ಪಿದ್ದು , ಪದ್ಮನಾಭ (49) ಕೊಲೆ ಮಾಡಿದ ಆರೋಪಿ.
ಘಟನೆ ವಿವರ:
ಜಾಗದ ವಿಚಾರವಾಗಿ ಹಲವು ಸಮಯದಿಂದ ನಡೆಯುತ್ತಿದ್ದ ಸಹೋದರರ ನಡುವಿನ ಗಲಾಟೆ ಕೊಲೆಯ ಮೂಲಕ ಅಂತ್ಯ ಕಂಡಿದೆ. ಸಹೋದರಿಬ್ಬರು ಕುಡಿದು ಮನೆಯಲ್ಲಿ ಆಗಾಗ ಗಲಾಟೆ ನಡೆಸುತ್ತಿದ್ದರು. ಒಂದು ತಿಂಗಳ ಹಿಂದೆ ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಂಗಳವಾರ ರಾತ್ರಿಯೂ ಗಲಾಟೆ ನಡೆದಿದೆ ಎನ್ನಲಾಗಿದ್ದು , ಬುಧವಾರ ಕೊಲೆಯಾಗಿದ್ದ ಬಗ್ಗೆ ವಿಟ್ಲ ಠಾಣೆಗೆ ದೂರು ಬಂದಿದೆ.
- Advertisement -