- Advertisement -
- Advertisement -
ವಿಟ್ಲ : ಜಾತ್ರೋತ್ಸವದ ವೇಳೆ ಅನ್ಯಮತೀಯ ವ್ಯಕ್ತಿಯೊಬ್ಬ ವ್ಯಾಪಾರ ನಡೆಸಲು ಆಗಮಿಸಿದ ವೇಳೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ತಡೆದು ತೆರವುಗೊಳಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ.
ಜಾತ್ರೋತ್ಸವದ ಸಂದರ್ಭದಲ್ಲಿ ಅನ್ಯಮತೀಯರು ವ್ಯಾಪಾರ ನಡೆಸಬಾರದು ಎಂದು ಹಿಂದೂ ಸಂಘಟನೆಗಳು ತಿಳಿಸಿದ್ದು, ಅನ್ಯಮತೀಯ ವ್ಯಕ್ತಿಯೊಬ್ಬ ವ್ಯಾಪಾರ ನಡೆಸಲು ಆಗಮಿಸಿದ ಬಗ್ಗೆ ಮಾಹಿತಿ ತಿಳಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಆ ವ್ಯಕ್ತಿಯನ್ನು ತಡೆದು ತೆರವುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಹಿಂದೂ ಧಾರ್ಮಿಕ ಸ್ಥಳಗಳಲ್ಲಿ ಅನ್ಯಮತೀಯರಿಗೆ ವ್ಯಾಪಾರ-ವ್ಯವಹಾರ ನಡೆಸಲು ಅವಕಾಶ ಕಲ್ಪಿಸಿದರೆ ಅಹಿತಕರ ಘಟನೆಗಳು ನಡೆಯಬಹುದೆನ್ನುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ಹಿಂದೂ ಸಂಘಟನೆಗಳು ತಿಳಿಸಿವೆ.
- Advertisement -