Sunday, May 5, 2024
spot_imgspot_img
spot_imgspot_img

ವಿಟ್ಲ: ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

- Advertisement -G L Acharya panikkar
- Advertisement -

ವಿಟ್ಲ: ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಇಲಾಖೆಯ ನಿರ್ದೇಶನದಂತೆ ಸಾಂಕೇತಿಕವಾಗಿ ಆಚರಿಸಲಾಯಿತು.

ಶಿಕ್ಷಕರ ಸಾಮೂಹಿಕ ಕನ್ನಡ ಗೀತೆ, ಸೀಮಿತ ವಿದ್ಯಾರ್ಥಿಗಳ ಕನ್ನಡ ಹಾಡುಗಳ ಮೂಲಕ ಕನ್ನಡ ಮಾತೆಗೆ ವಿಶೇಷವಾದ ಗೌರವ ಸಲ್ಲಿಸಲಾಯಿತು.ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಉಪಸ್ಥಿತರೆಲ್ಲರಿಂದ ಪುಷ್ಪಾರ್ಚನೆ ಸಲ್ಲಿಸಲಾಯಿತು.

ದೈಹಿಕ ಶಿಕ್ಷಕ ಭಾನುಪ್ರಕಾಶ್, ರಾಜ್ಯೋತ್ಸವ ಆಚರಣೆಯ ಪ್ರಾಮುಖ್ಯತೆಯನ್ನು ವಿವರಿಸಿದರು.ಶಾಲಾ ಹಳೆ ವಿದ್ಯಾರ್ಥಿಗಳಾದ ದಿವ್ಯನಿಧಿ ಹಾಗೂ ಇತರರು ಆಗಮಿಸಿ ಕನ್ನಡ ಹಾಡನ್ನು ಹಾಡಿ ಕಾರ್ಯಕ್ರಮಕ್ಕೆ ಮೆರುಗು ಕೊಟ್ಟರು.

ಅಗಲಿದ ಖ್ಯಾತ ಕನ್ನಡ ಚಿತ್ರ ನಟ ಪುನೀತ್‍ರಾಜ್ ಕುಮಾರ್ ರವರ ಆತ್ಮಕ್ಕೆ ಶಾಂತಿಯನ್ನು ಕೋರಿ, ಒಂದು ನಿಮಿಷದ ಮೌನಪ್ರಾರ್ಥನೆ ನೆರವೇರಿಸಲಾಯಿತು. ಶಾಲಾ ಪ್ರಾಂಶುಪಾಲರು, ಉಪಪ್ರಾಂಶುಪಾಲೆಯರು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ನಿಯಮಿತ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಗಳಾದರು. ಕನ್ನಡ ಶಿಕ್ಷಕಿಯರಾದ ಸವಿತಾ ಕಾರ್ಯಕ್ರಮ ನಿರೂಪಿಸಿ, ಕವಿತಾ ಸಹಕರಿಸಿದರು.

- Advertisement -

Related news

error: Content is protected !!