- Advertisement -
- Advertisement -
ವಿಟ್ಲ: ಇಡ್ಕಿದು ಗ್ರಾಮದ ಕೋಲ್ಪೆ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ಜನವರಿ 3 ರಿಂದ 8ರ ತನಕ ಬ್ರಹ್ಮಕಲಶ ನಡೆಯಲಿದೆ.
ಜನವರಿ 3 ರಿಂದ 8ರ ತನಕ ನಡೆಯಲಿರುವ ಕೋಲ್ಪೆ ಶ್ರೀ ಷಣ್ಮುಖ ಸುಬ್ರಮಣ್ಯ ದೇವಸ್ಥಾನದ ಬ್ರಹ್ಮಕಲಶದಲ್ಲಿ ಭಾಗವಹಿಸಲು ಜಗದ್ಗುರು ಶ್ರೀ ಶ್ರೀ ಶ್ರೀ ರಾಘವೇಶ್ವರ ಮಹಾಸ್ವಾಮಿಗಳನ್ನು ಭೇಟಿಯಾಗಿ ಬ್ರಹ್ಮಕಲಶದ ಆಮಂತ್ರಣ ನೀಡಿ ಕಾರ್ಯಕ್ರಮಕ್ಕೆ ಆಮಂತ್ರಿಸಲಾಯಿತು.
ಈ ಸಂದರ್ಭದಲ್ಲಿ ಬ್ರಹ್ಮಕಲಶ ಸಮಿತಿಯ ಅಧ್ಯಕ್ಷರಾದ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಷಣ್ಮುಖ ಸುಬ್ರಮಣ್ಯ ದೇವಸ್ಥಾನ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಸುರೇಶ್ ಮುಕ್ಕುಡ, ಬ್ರಹ್ಮಕಲಶ ಸಮಿತಿಯ ಸದಸ್ಯರಾದ ಗೋಪಾಲಕೃಷ್ಣ ಮಿತ್ತೂರು, ಕಿರಣ್ ಬೈಪದವು ಉಪಸ್ಥಿತರಿದ್ದರು.
- Advertisement -