- Advertisement -
- Advertisement -
ವಿಟ್ಲ: ಕಾರು ಚಾಲಕನೋರ್ವ ತನ್ನ ಹುಚ್ಚಾಟದ ಪರಿಣಾಮದಿಂದ ಮಹಿಳೆಯರು ಗೋಳಾಡಿದ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ. ಕಾರನ್ನು ವೇಗವಾಗಿ ಅಡ್ಡಾದಿಡ್ಡಿ ಓಡಿಸಿದ ಪರಿಣಾಮ ಕಾರಿನಲ್ಲಿದ್ದ ಮಹಿಳಾ ಪ್ರಯಾಣಿಕರು ಆತಂಕಗೊಂಡಿದ್ದಾರೆ. ಇದರಿಂದ ಹೆದರಿದ ಮಹಿಳೆಯರು ಕಿರುಚಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರು ಮಹಿಳಾ ಅಪಹರಣ ಎಂದು ತಿಳಿದು ಕಾರನ್ನು ಅಡ್ಡಗಟ್ಟಿದ್ದಾರೆ.
ಮಂಗಳೂರು ಹೊರವಲಯದ ತೊಕ್ಕೊಟ್ಟು ಪಿಲಾರಿನ ಮಹಿಳಾ ಪ್ರಯಾಣಿಕರು ಕದ್ರಿಯಿಂದ ಬಾಡಿಗೆ ಕಾರಿನಲ್ಲಿ ಪಣೋಲಿಬೈಲು ಕ್ಷೇತ್ರಕ್ಕೆ ಹೊರಟಿದ್ದರು ಎನ್ನಲಾಗಿದೆ.
ಸಾಲೆತ್ತೂರು ಸಮೀಪ ಸಾರ್ವಜನಿಕರ ಕಾರ್ಯಾಚರಣೆ ನಡೆಸಿ ಕಾರನ್ನು ತಡೆದು ಮಹಿಳೆಯರನ್ನು ರಕ್ಷಿಸಿದ್ದಾರೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಚಾಲಕ ಕಾಡುಮಠ ನಿವಾಸಿ ಸಾಗರ್(26) ಎಂಬಾತನನ್ನು ಬಂಧಿಸಿದ್ದಾರೆ.
- Advertisement -