ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ ಸಭಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಡಿ. 18 ರಂದು ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಡಾ| ಬಾಲಗಂಗಾಧರನಾಥ ಮಹಾಸ್ವಾಮೀಜಿಗಳವರ ಪೂರ್ಣಾನುಗ್ರಹದೊಂದಿಗೆ ವಿಟ್ಲ ಶಾಂತಿನಗರ ’ಅಕ್ಷಯ’ ಶ್ರೀಮತಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಂಗಣದಲ್ಲಿ ನಡೆಯಲಿದೆ.
ಬೆಳಿಗ್ಗೆ ಗಂಟೆ 7 ರಿಂದ ಶ್ರೀ ಗಣಪತಿ ಹೋಮ, ಗಂಟೆ 8 ರಿಂದ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಬಳಿಕ ಸಭಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ನಡೆಯಲಿದೆ.
ಸಭಾಧ್ಯಕ್ಷತೆಯನ್ನು ವಿಟ್ಲ ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷ ಕೆ.ಮೋನಪ್ಪ ಗೌಡ ಶಿವಾಜಿನಗರ ವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘ (ರಿ) ಬೆಂಗಳೂರು ಇದರ ಅಧ್ಯಕ್ಷ ಸಿ.ಎನ್ ಬಾಲಕೃಷ್ಣ, ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು, ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ) ಅಧ್ಯಕ್ಷ ಡಾ. ಕೆ.ವಿ ಚಿದಾನಂದ, ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ) ಪ್ರಧಾನ ಕಾರ್ಯದರ್ಶಿ ಹಾಗೂ ಕ.ರಾ.ಒಕ್ಕಲಿಗರ ಸಂಘ(ರಿ) ಉಪಾಧ್ಯಕ್ಷ ಡಾ. ಕೆ.ವಿ ರೇಣುಕಾಪ್ರಸಾದ್, ದ.ಕ ಜಿಲ್ಲಾ ಗೌಡ ಸೇವಾ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪುತ್ತೂರು ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ ನ ಅಧ್ಯಕ್ಷ ಮನೋಹರ ಡಿ.ವಿ, ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಮೋಹನ್ ಕಾಯರ್ಮಾರ್ ಗೌರವ ಉಪಸ್ಥಿತರಿರುವರು ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.