Wednesday, May 15, 2024
spot_imgspot_img
spot_imgspot_img

ವಿಟ್ಲ: (ಡಿ.26) ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನ ಧರ್ಮನಗರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

- Advertisement -G L Acharya panikkar
- Advertisement -

ವಿಟ್ಲ: ಕಂಬಳಬೆಟ್ಟು ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನ ಧರ್ಮನಗರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಡಿ. 26ರಂದು ನೂಜಿಯಲ್ಲಿರುವ ಮಿತ್ತೂರು ವೇದಮೂರ್ತಿ ಪುರೋಹಿತ ಗೋಪಾಲಕೃಷ್ಣ ಭಟ್ ಇವರ ನೇತೃತ್ವದಲ್ಲಿ ಧರ್ಮನಗರ ಶ್ರೀ ದುರ್ಗಾಮಂದಿರದಲ್ಲಿ ನಡೆಯಲಿದೆ.

26-12-2022ನೇ ಸೋಮವಾರ ಬೆಳಿಗ್ಗೆ ಗಂಟೆ 6.30ಕ್ಕೆ ಶ್ರೀಮತಿ ಶ್ವೇತಾ ಮತ್ತು ಶ್ರೀ ಪುರುಷೋತ್ತಮ ಜೇಡರಕೋಡಿ ಇವರಿಂದ ದೀಪ ಪ್ರಜ್ವಲನೆ ನಡೆಯಲಿದೆ. ಬಳಿಕ ಅರ್ಧ ಏಕಾಹ ಭಜನೆ ಪ್ರಾರಂಭಗೊಳ್ಳಲಿದೆ. ಬೆಳಿಗ್ಗೆ ಗಣಪತಿ ಹವನ, ಕಲಶ ಪ್ರತಿಷ್ಠೆ, ನವಕ ಕಲಶಾಭಿಷೇಕ, ಮಧ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಸಂಜೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಅರ್ಧ ಏಕಾಹ ಭಜನೆ ಮಂಗಳ ಬಳಿಕ ಸಾಮೂಹಿಕ ದುರ್ಗಾ ಪೂಜೆ, ರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!