ವಿಟ್ಲ : ನೆಕ್ಕರೆ ಕಾಡಿನಲ್ಲಿ ತಲೆ ಬುರುಡೆ ಮತ್ತು ಎಲುಬು ಹಾಗೂ ಬಟ್ಟೆ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವನ್ನಪ್ಪಿದ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಉಕ್ಕುಡ ಕಾನತಡ್ಕ ನಿವಾಸಿ ನಾಗೇಶ್ ಗೌಡ(65) ಎಂದು ಗುರುತಿಸಲಾಗಿದೆ. ನಾಗೇಶ್ ಗೌಡ ರವರು 6 ತಿಂಗಳ ಹಿಂದೆ ನಾಪತ್ತೆಯಾಗಿದ್ದು , ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
READ THIS TOO: ವಿಟ್ಲ: ಕಾನತ್ತಡ್ಕ ನಿವಾಸಿ ನಾಗೇಶ ಗೌಡ ನಾಪತ್ತೆ
ನಿನ್ನೆ ಸಂಜೆ ವೇಳೆ ಗುಡ್ಡಕ್ಕೆ ಕಟ್ಟಿಗೆಗೆ ತೆರಳಿದ್ದವರಿಗೆ ತಲೆ ಬುರುಡೆ, ಎಲುಬು ಬಟ್ಟೆಗಳು ಕಾಣ ಸಿಕ್ಕಿದ್ದು , ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು , ಸ್ಥಳಕ್ಕಾ ಗಮಿಸಿದ ಪೊಲೀಸರು ನಾಪತ್ತೆ ಪ್ರಕರಣಗಳ ಜಾಡು ಹಿಡಿದು ತನಿಖೆ ನಡೆಸಿದ್ದಾರೆ. ಈ ವೇಳೆ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿ ನಾಪತ್ತೆಯಾದ ನಾಗೇಶ್ ಎಂಬವರ ಮಗನನ್ನು ಸ್ಥಳಕ್ಕೆ ಕರೆಸಿ ಪರಿಶೀಲಿಸಿದಾಗ ಅದು ನಾಗೇಶ್ ಗೌಡ ಎಂದು ಅವರ ಮಗ ಗುರುತು ಪತ್ತೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ವಿಟ್ಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲು
ಜನವರಿ 31 ರಂದು ಸಂಜೆ ವಿಪರೀತ ಮದ್ಯ ಸೇವಿಸಿ ಮನೆಗೆ ಬಂದು ಪತ್ನಿ ಸುಮತಿಯವರೊಂದಿಗೆ ಜಗಳ ಮಾಡಿ ಮರುದಿನ ಬೆಳಿಗ್ಗೆ ಸುಮಾರ್ 6 ಗಂಟೆಗೆ ಮನೆಯಿಂದ ಹೊರಟು ಹೋಗಿದ್ದಾರೆ. ಎಂದು ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆ ಲುಕ್ಔಟ್ ನೋಟಿಸ್ ಜಾರಿ ಮಾಡಿತ್ತು.