ವಿಟ್ಲ: ದ.ಕ.ಜಿ. ಪಂಚಾಯತ್ ಕಿರಿಯ ಪ್ರಾಥಮಿಕ ಶಾಲೆ ಅಳಕೆಮಜಲು ಶಾಲೆಯು ಬೆಳ್ಳಿಹಬ್ಬದ ಸಂಭ್ರಮದಲ್ಲಿದೆ. ಬೆಳ್ಳಿ ಹಬ್ಬ ಸಂಭ್ರಮದಲ್ಲಿರುವ ಅಳಕೆಮಜಲು ಶಾಲೆಯಲ್ಲಿ ಸ್ಥಾಪನಾ ದಿನವಾದ ಇಂದು 25ನೇ ವರ್ಷದ ಹುಟ್ಟುಹಬ್ಬವನ್ನು ಶಾಲಾ ಲಾಂಛನ ಬಿಡುಗಡೆ ಮಾಡುವ ಮೂಲಕ ಆಚರಿಸಲಾಯಿತು..Education is Light For Life… ಎಂಬ ಘೋಷವಾಕ್ಯವನ್ನು ನಿವೃತ್ತ ಶಿಕ್ಷಕರಾದ ರಮೇಶ್ ಬಾಯಾರು ಅವರು ಘೋಷಿಸಿದರು.
ಕಾರ್ಯಕ್ರಮದಲ್ಲಿ ಬೆಳ್ಳಿಹಬ್ಬ ಸಮಿತಿಯ ಗೌರವ ಸಲಹೆಗಾರರಾದ ಪಿ. ರಾಜಾರಾಮ ಶೆಟ್ಟಿ ಕೋಲ್ಪೆ ಗುತ್ತು, SDMC ಶಿಕ್ಷಣ ತಜ್ಞರಾದ ಅಬ್ದುಲ್ ರಹಮಾನ್ ಹಾಜಿ ಮಸ್ಕತ್, ಬೆಳ್ಳಿಹಬ್ಬ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಪಲ್ಯ, ಎಸ್ಡಿಎಂಸಿ ಅಧ್ಯಕ್ಷರಾದ ಸುಮಲತಾ ಅಳಕೆಮಜಲು, ಹಿರಿಯರಾದ ಕೃಷ್ಣಪ್ಪ ಕೆಮ್ಮನಾಜೆ, ಬೆಳ್ಳಿಹಬ್ಬ ಸಮಿತಿಯ ಉಪಾಧ್ಯಕ್ಷರಾದ ಜಗದೀಶ್ ಪೂಜಾರಿ, ಉದ್ಯಮಿ ರಮೇಶ್ ದೇವಸ್ಯ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುಧೀರ್ ಕುಮಾರ್, ಬೆಳ್ಳಿಹಬ್ಬ ಸಮಿತಿಯ ಗೌರವ ಸಲಹೆಗಾರರಾದ ಮಹಮ್ಮದ್ ಕುಂಞಿ ಅಳಕೆಮಜಲು, ಶಾಲಾ ಶಿಕ್ಷಕ ವೃಂದ ಹಾಗೂ ಪೋಷಕರು ಹಾಜರಿದ್ದರು.