- Advertisement -
- Advertisement -
ವಿಟ್ಲ: ನಂದಿಕೂರಿನಿಂದ ಕಾಸರಗೋಡಿಗೆ ಹೋಗುವ 400ಕೆ.ವಿ ಹೈ ಟೆನ್ಶನ್ ಮಾರ್ಗವನ್ನು ಪುಣಚ ಗ್ರಾಮದ ಬೈರಿಕಟ್ಟೆಯಿಂದ ಕಾಮಗಾರಿ ಆರಂಭ ಮಾಡಲು ಯತ್ನಿಸಿದಾಗ ಪರಿಸರದ ರೈತಾಪಿವರ್ಗದವರು ತೀವ್ರವಾಗಿ ಪ್ರತಿಭಟಿಸಿದ ಘಟನೆ ನಡೆದಿದೆ.
ವಿಷಯ ತಿಳಿದು ಸ್ಥಳಕ್ಕೆ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ತಕ್ಷಣ ಕಾಮಗಾರಿಗಳನ್ನು ನಿಲ್ಲಿಸಬೇಕು ಮತ್ತು ಈ ಭಾಗದ ರೈತರ ಸಭೆ ಕರೆದು ಚರ್ಚಿಸಬೇಕು ಎಂದರು . ಇದಕ್ಕೆ ಸ್ಪಂದಿಸಿದ ಡಿ.ಸಿಯವರು ಕಾಮಗಾರಿಯನ್ನು ಈ ಕೂಡಲೇ ನಿಲ್ಲಿಸುವಂತೆ ಬಂಟ್ವಾಳ ತಹಸೀಲ್ದಾರವರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಪುತ್ತೂರು ಮಂಡಲ ಬಿಜೆಪಿ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ವಿಟ್ಲ ಬಿಜೆಪಿ ಪ್ರಮುಖ ಕರುಣಾಕರ ನಾಯ್ತೊಟ್ಟು,ಪುಣಚ ಪಂಚಾಯತು ಸದಸ್ಯರಾದ ಅಶೋಕ್ ಮೂಡಂಬೈಲು,ತೀರ್ಥರಾಮ್, ರೈತ ಮುಖಂಡ ಸಂಜೀವ ಗೌಡ ಮೊದಲಾದವರು ಉಪಸ್ಥಿತರಿದ್ದರು.
- Advertisement -