Thursday, May 2, 2024
spot_imgspot_img
spot_imgspot_img

ವಿಟ್ಲ: ನೂರಾರು ಬಿಜೆಪಿ ಕಾರ್ಯಕರ್ತರ ವಿರೋಧದ ನಡುವೆ ರಾಜೇಶ್ ಬಾಳೆಕಲ್ಲು ಬಿಜೆಪಿಗೆ ಸೇರ್ಪಡೆ

- Advertisement -G L Acharya panikkar
- Advertisement -
vtv vitla
vtv vitla

ಕಬಕದಲ್ಲಿ ಇಂದು ನಡೆದ ಬಿಜೆಪಿ ಪ್ರಚಾರದಲ್ಲಿ ರಾಜೇಶ್ ಬಾಳೆಕಲ್ಲು ಅವರನ್ನು ಬಿಜೆಪಿಗೆ ಸೇರ್ಪಡಿಸಲಾಯಿತು. ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪದಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಮತ್ತು ಮಾಣಿಲ ಗ್ರಾಮ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಮಾಜಿ ಅಧ್ಯಕ್ಷ, ಹಾಲಿ ಉಪಾಧ್ಯಕ್ಷ ರಾಜೇಶ್ ಕುಮಾರ್ ಬಾಳೆಕಲ್ಲು ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಇವರನ್ನು ಬಿಜೆಪಿಗೆ ಸೇರ್ಪಡೆ ಮಾಡಿದ್ದಕ್ಕೆ ಸಿಡಿದೆದ್ದ ಬಿಜೆಪಿ ಕಾರ್ಯಕರ್ತರು ಪ್ರಚಾರ ಸಭೆಯಲ್ಲೆ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಈ ಪ್ರಚಾರ ಸಭೆಯಲ್ಲಿ ಮಾಣಿಲ ಗ್ರಾಮ ಪಂಚಾಯತ್ 8 ಸದಸ್ಯರೊಂದಿಗೆ ಬಿಜೆಪಿಗೆ ಸೇರ್ಪಡೆಗೊಂಡರು. ಇಂದು ಅಧಿಕೃತವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಎಸ್ ಅಂಗಾರ, ವಿಧಾನ ಪರಿಷತ್ ಅಭ್ಯರ್ಥಿ, ಪುತ್ತೂರು ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು.

ಏನಿದು ಹಿನ್ನಲೆ: ಕಾಂಗ್ರೆಸ್ ಪಕ್ಷದಿಂದ ರಾಜೇಶ್ ಬಾಳೆಕಲ್ಲು ಉಚ್ಚಾಟನೆ..!?
ಇತ್ತೀಚಿಗೆ ನಡೆದ ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಪ್ರಚಾರ ಮಾಡಿರುವುದಾಗಿಯೂ ಹಾಗೂ ಪಕ್ಷದ ನಾಯಕರನ್ನು ಅವಹೇಳನಕಾರಿಯಾಗಿ ನಿಂದಿಸಿದ್ದರು. ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಈ ವಿಚಾರವಾಗಿ ಪರಿಶೀಲಿಸಲಾಗಿ ಬ್ಲಾಕ್ ಕಾಂಗ್ರೆಸ್ ದೂರಿನಲ್ಲಿ ಸತ್ಯಾಸತ್ಯತೆ ಇದ್ದು, ಪಕ್ಷ ವಿರೋಧಿ ಚಟುವಟಿಕೆ ಮಾಡಿರುವುದು ಸಾಬೀತಾದ ಹಿನ್ನಲೆ ರಾಜೇಶ ಬಾಳೆಕಲ್ಲು ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿತ್ತು.

ಸ್ವಾಗತ ಬಿಜೆಪಿ ಪುತ್ತೂರು ಮಂಡಲ ಇದರ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವ, ವಂದನಾರ್ಪಣೆ ದಯಾನಂದ ಶೆಟ್ಟಿ ಉಜಿರೆಮಾರು, ಹರಿಪ್ರಸಾದ್ ಯಾದವ್ ಕಾರ್ಯಕ್ರಮ ನಿರೂಪಿಸಿದರು.

vtv vitla
- Advertisement -

Related news

error: Content is protected !!