- Advertisement -
- Advertisement -
ವಿಟ್ಲ: ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ನಿವೃತ್ತ ಯೋಧ ರಿಗೆ ಸನ್ಮಾನ ಕಾರ್ಯಕ್ರಮ ಗ್ರಾಮ ಪಂಚಾಯತ್ ಕಛೇರಿ ವಠಾರದಲ್ಲಿ ನಡೆಯಿತು.
ಪಂಚಾಯತ್ ಅಧ್ಯಕ್ಷ ಸತೀಶ್ ಪೂಜಾರಿ ಕೊಪ್ಪರಿಗೆ ಧ್ವಜಾರೋಹಣಗೈದರು. ಆ.15ರ ಮಹತ್ವದ ಬಗ್ಗೆ ಗ್ರಾಮ ಪಂಚಾಯತ್ ಸದಸ್ಯರುಗಳಾದ ಲತೀಫ್ ನೇರಳಕಟ್ಟೆ, ಅಶೋಕ್ ರೈ ಹಾಗೂ ಶಾಲಿನಿ ಮಾತನಾಡಿದರು.
ಗ್ರಾ.ಪಂ.ಉಪಾಧ್ಯಕ್ಷೆ ಶಕೀಲಾ ಕೆ.ಪೂಜಾರಿ, ಸದಸ್ಯರುಗಳಾದ ಧನುಂಜಯ, ಪ್ರೇಮಾ, ಸಮಿತಾ ಡಿ.ಪೂಜಾರಿ, ಜಯಂತಿ ಹರೀಶ್ ಪೂಜಾರಿ, ಲಕ್ಷ್ಮೀ ಮೊದಲಾದವರು ಉಪಸ್ಥಿತರಿದ್ದರು.
ಇದೇ ವೇಳೆ ನಿವೃತ್ತ ಯೋಧ ಮೋಹನ್ ಗೌಡ.ಕೆ ಅವರನ್ನು ಸನ್ಮಾನಿಸಲಾಯಿತು. ಪಂಚಾಯತ್ ಕಾರ್ಯದರ್ಶಿ ವಿಮಲಾ ಪಿ.ಸ್ವಾಗತಿಸಿ, ವಂದಿಸಿದರು. ನಿವೃತ್ತ ಶಿಕ್ಷಕ ರಾಮಚಂದ್ರ ಮಾಸ್ತರ್ ಕಾರ್ಯಕ್ರಮ ನಿರೂಪಿಸಿದರು.
- Advertisement -