Sunday, June 29, 2025
spot_imgspot_img
spot_imgspot_img

ವಿಟ್ಲ: ಪಡಿ ಬಾಗಿಲು ಶಾಲೆಯಲ್ಲಿ ಪೀಠೋಪಕರಣಗಳ ಹಸ್ತಾಂತರ ಕಾರ್ಯಕ್ರಮ

- Advertisement -
- Advertisement -

ವಿಟ್ಲ: ಪಡಿ ಬಾಗಿಲು ಶಾಲೆಯಲ್ಲಿ ಜಿಲ್ಲಾ ಪಂಚಾಯತ್ ಅನುದಾನದಿಂದ ಖರೀದಿಸಿದ ಪೀಠೋಪಕರಣಗಳ ಹಸ್ತಾಂತರ ಕಾರ್ಯಕ್ರಮ ಜರುಗಿತು.

ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಯಶಸ್ವಿನಿ ಶಾಸ್ತ್ರಿಯವರು ಸಭಾಧ್ಯಕ್ಷತೆ ವಹಿಸಿ ಶಾಲೆಗೆ ಶುಭ ಹಾರೈಸಿದರು. ಜಿ.ಪಂ.ನಿಕಟಪೂರ್ವ ಸದಸ್ಯರಾದ ಶ್ರೀಮತಿ ಜಯಶ್ರೀ ಕೊಡಂದೂರುರವರು ಪೀಠೋಪಕರಣಗಳನ್ನು ಶಾಲೆಗೆ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ L K.G ಮತ್ತುU.K.G ಮಕ್ಕಳ ಪೋಷಕರಿಗೆ ಪಠ್ಯಪುಸ್ತಕ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕೇಪು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾಘವ ಮಣಿಯಾಣಿ, ಸದಸ್ಯ ಜಗಜೀವನ್ ರಾಮ್, ಮೋಹಿನಿ, ಮಾಜಿ ಸೈನಿಕರು ಹಾಗೂ ಶಾಲಾಹಿತೈಷಿ ಸೀತಾರಾಮ ಶೆಟ್ಟಿ ಕುಕ್ಕೆಬೆಟ್ಟು, ಶಾಲಾ ಹಿತಚಿಂತಕ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಎಸ್.ಡಿ.ಎಂ.ಸಿ.ಅಧ್ಯಕ್ಷ ಬಾಲಕೃಷ್ಣ ಕಾರಂತ , ಉಪಾಧ್ಯಕ್ಷೆ ರೇಖಾ, ವಿದ್ಯಾಸಿರಿ ಶಿಕ್ಷಣ ಕೇಂದ್ರದ ಅಧ್ಯಕ್ಷ ಪ್ರಭಾಕರ ಶೆಟ್ಟಿ, ಗೌರವಾಧ್ಯಕ್ಷ ಲಿಂಗಪ್ಪ ಗೌಡ, ಕಾರ್ಯದರ್ಶಿ ಜಿನಚಂದ್ರ ಜೈನ್ ಮತ್ತು ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

ಎಸ್.ಡಿ.ಎಂ.ಸಿ ಅಧ್ಯಕ್ಷ ಬಾಲಕೃಷ್ಣ ಕಾರಂತರು ಸ್ವಾಗತಿಸಿದರು.ಮುಖ್ಯಶಿಕ್ಷಕಿ ಶಶಿಕಲಾ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.ವಿದ್ಯಾಸಿರಿ ಶಿಕ್ಷಣ ಕೇಂದ್ರದ ಕಾರ್ಯದರ್ಶಿ ಜಿನಚಂದ್ರ ಜೈನ್ ಧನ್ಯವಾದ ಸಲ್ಲಿಸಿದರು.ಪ್ರೌಢಶಾಲಾ ಸಹಶಿಕ್ಷಕಿ ಪುಷ್ಪಾವತಿ ಕಾರ್ಯಕ್ರಮ ನಿರೂಪಿಸಿದರು.

- Advertisement -

Related news

error: Content is protected !!