- Advertisement -
- Advertisement -
ವಿಟ್ಲ: ಕೃಷಿಯಲ್ಲಿ ಅಸಮಾನ್ಯ ಸಾಧನೆ ಮಾಡಿ ಈ ಮೊದಲೇ ಅನೇಕ ಪ್ರಶಸ್ತಿ ಪುರಸ್ಕಾರಗಳನ್ನು ಪಡೆದು ಇದೀಗ ನಮ್ಮ ದೇಶದ ಹೆಮ್ಮೆಯ ಗೌರವ ಪ್ರಶಸ್ತಿಗಳಲ್ಲೊಂದಾದ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದ ಆಮೈ ಮಹಾಲಿಂಗ ನಾಯ್ಕ ಇವರನ್ನು ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ವತಿಯಿಂದ ಅವರ ಸ್ವಗೃಹದಲ್ಲಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ಅಧ್ಯಕ್ಷ ಬಿ ಸಂದೇಶ ಶೆಟ್ಟಿ, ಲಯನ್ಸ್ ಜಿಲ್ಲಾ ಪ್ರಾಂತೀಯ ಸಲಹೆಗಾರರಾದ ಸುದರ್ಶನ್ ಪಡಿಯಾರ್ ವಿಟ್ಲ, ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ಗೈಡಿಂಗ್ ಲಯನ್ ಸತೀಶ್ ಕುಮಾರ್ ಆಳ್ವ, ಕ್ಲಬ್ ನ ಸಕ್ರಿಯ ಸದಸ್ಯರುಗಳಾದ ಸುರೇಶ್ ಬನಾರಿ, ಹರೀಶ್ ಶೆಟ್ಟಿ ಡಿ ಮುಂತಾದವರು ಉಪಸ್ಥಿತರಿದ್ದರು.
- Advertisement -