- Advertisement -
- Advertisement -
ವಿಟ್ಲ : ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಾ. 10ರಂದು ಬೆಳಿಗ್ಗೆ ಗಂಟೆ 7.30 ರಿಂದ ಗಣಪತಿ ಹೋಮ, ಅಂಕುರ ಪೂಜೆ, ಶಾಂತಿ ಹೋಮ, ಶ್ವಶಾಂತಿ ಹೋಮ, ಚೋರ ಶಾಂತಿ ಹೋಮ, ಅದ್ಬುತ ಶಾಂತಿ ಹೋಮ, ಹೋಮಕಲಶಾಭಿಷೇಕ ಮಧ್ಯಾಹ್ನ ಪೂಜೆ ನಡೆಯಲಿದೆ. ಸಂಜೆ ಗಂಟೆ 6 ರಿಂದ ಅಂಕುರ ಪೂಜೆ, ದುರ್ಗಾನಮಸ್ಕಾರ ಪೂಜೆ, ಆಶ್ಲೇಷಾ ಬಲಿ, ರಾತ್ರಿ ಪೂಜೆ ನಡೆಯಲಿದೆ.
ಬೆಳಿಗ್ಗೆ ಗಂಟೆ 10 ರಿಂದ 12.30ರ ವರೆಗೆ ಶ್ರೀಮತಿ ಶ್ರದ್ದಾ ಭಟ್ ನಾರ್ಯಪಳ್ಳ ಮತ್ತು ಬಳಗದವರಿಂದ “ಹರಿಕಥೆ”, ಸಂಜೆ ಗಂಟೆ 6.30 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಗಂಟೆ 8.30 ರಿಂದ ಸಚಿವರನ್ನೇ ಮಾಯ ಮಾಡಿದ ಮಾಂತ್ರಿಕ ಮೆಗಾ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್ ಹಾಗೂ ಬಳಗದವರಿಂದ ಮಸ್ತ್ ಮ್ಯಾಜಿಕ್ ಅದ್ಭುತ-ಹಾಸ್ಯಮಯ-ವಿನೂತನ ಜಾದೂ ನಡೆಯಲಿದೆ.
- Advertisement -