Tuesday, April 16, 2024
spot_imgspot_img
spot_imgspot_img

ವಿಟ್ಲ : ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ -6 ನೇ ದಿನದ ಕಾರ್ಯಕ್ರಮದ ವಿವರ

- Advertisement -G L Acharya panikkar
- Advertisement -

ವಿಟ್ಲ : ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು 6 ನೇ ದಿನವಾದ ಇಂದು ಬೆಳಿಗ್ಗೆ ಗಂಟೆ 7.30 ರಿಂದ ಮಹಾಗಣಪತಿ ಹವನ, ಧ್ವಜಾರೋಹಣ, ಪರಿವಾರ ದೇವರಿಗೆ ಕಲಶಾಭಿಷೇಕ ನಡೆಯಿತು. 10-45 ರ ವೃಷಭ ಲಗ್ನದ ಸುಮುಹೂರ್ತದಲ್ಲಿ ಶ್ರೀ ಮಹಿಷಮರ್ದಿನಿ ದುರ್ಗೆಗೆ ದ್ರವ್ಯ ಕಲಶಾಭಿಷೇಕ ಸಹಿತ ಬ್ರಹ್ಮಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 7 ಕ್ಕೆ ದೇವರ ಉತ್ಸವ ಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ, ಧ್ವಜಾವರೋಹಣ ನಡೆಯಲಿದೆ.

ಸಂಜೆ ಗಂಟೆ 5.30 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಗಂಟೆ 8.30 ಕ್ಕೆ ವಿಜಯಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದಲ್ಲಿ ’ಕಲಾಸಂಗ ’ ಕಲಾವಿದರು ಮಂಗಳೂರು ಇವರಿಂದ ತುಳು ರಂಗಭೂಮಿಯಲ್ಲಿ ಚಾರಿತ್ರಿಕ ದಾಖಲೆ ನಿರ್ಮಿಸಿದ ಸ್ವರಾಜ್ ಶೆಟ್ಟಿ ಅಭಿನಯಿಸುವ ವಿಭಿನ್ನ ಶೈಲಿಯ “ಶಿವದೂತೆ ಗುಳಿಗೆ” ತುಳು ನಾಟಕ ನಡೆಯಲಿದೆ.

- Advertisement -

Related news

error: Content is protected !!