Tuesday, April 30, 2024
spot_imgspot_img
spot_imgspot_img

ಬಂಟ್ವಾಳ: ಪೆಟ್ರೋಲ್ ಸುರಿದು ಯುವಕನ ಕೊಲೆ ಮಾಡಿದ್ದೇನೆ ಎಂದು ಹೇಳಿದ್ದ ವ್ಯಕ್ತಿ ವಿಟ್ಲ ಪೊಲೀಸ್ ವಶಕ್ಕೆ – ಪೊಲೀಸರಿಂದ ವಿಚಾರಣೆ – ಘಟನೆ ಸುತ್ತ ಅನುಮಾನದ ಹುತ್ತ..!

- Advertisement -G L Acharya panikkar
- Advertisement -

ವಿಟ್ಲ: ಪೆಟ್ರೋಲ್ ಸುರಿದು ಯುವಕನನ್ನು ಕೊಲೆ ಮಾಡಿದ್ದೇನೆ ಎಂದು ಹೇಳಿದ್ದ ವ್ಯಕ್ತಿಯೋರ್ವನನ್ನು ವಿಟ್ಲ ಪೋಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ನಿಜಾಂಶ ಬಯಲಾಗಿದೆ. ಬಂಧಿತ ಆರೋಪಿಯನ್ನು ಬೋಳಂತೂರು ನಿವಾಸಿ ಅದ್ದು ಯಾನೆ ಅದ್ರಾಮ ಎನ್ನಲಾಗಿದೆ. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಅದ್ರಾಮ, ಸಮಾದ್ ಎಂಬಾತನನ್ನು ಪೆಟ್ರೋಲ್ ಹಚ್ಚಿ ಕೊಲೆ ಮಾಡಿದ್ದ.

ಏನಿದು ಪ್ರಕರಣ..!
ಆದಿತ್ಯವಾರ ರಾತ್ರಿ ಯುವಕನೋರ್ವನನ್ನು ಕಿಡ್ನಾಪ್ ಮಾಡಿ ಬಳಿಕ ಕೊಲೆ ಮಾಡಲಾಗಿದೆ ಎಂಬ ಸುದ್ದಿ ಸೋಮವಾರ ಬೆಳಿಗ್ಗೆಯಿಂದ ಹರಡಿತ್ತು. ಇದು ವದಂತಿಯೋ ಅಥವಾ ಸತ್ಯ ವಿಚಾರವೋ ಎಂದು ಗೊತ್ತಿಲ್ಲದೆ ಪೊಲೀಸರು ಸೋಮವಾರ ಬೆಳಿಗ್ಗೆಯಿಂದ ತಲೆಕೆಡಿಸಿಕೊಂಡಿದ್ದರು. ಈ ಘಟನೆ ಬಗ್ಗೆ ಕೋಣಾಜೆ, ವಿಟ್ಲ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು. ಹೇಳಿಕೆ ನೀಡಿದ್ದ ವ್ಯಕ್ತಿಗಾಗಿ ಪೊಲೀಸರು ಬಲೆ ಬೀಸಿದ್ದರು. ಕೊನೆಗೂ ಕೊಲೆ ಮಾಡಿದ್ದೇನೆ ಎಂದು ಹೇಳಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ 19 ವರ್ಷದ ಯುವಕ ಸಮಾದ್ ಎಂಬಾತನನ್ನು ಕೊಲೆ ಮಾಡಿದ್ದು ತಿಳಿದುಬಂದಿದೆ.

ಬೋಳಂತೂರು ನಿವಾಸಿ ಅದ್ದು ಯಾನೆ ಅದ್ರಾಮ ಎಂದು ಹೇಳಲಾಗುತ್ತಿದ್ದು ಆತನನ್ನು ಪೋಲೀಸರು ವಶಕ್ಕೆ ಪಡೆದುಕೊಂಡು ಬಳಿಕ ವಿಚಾರಣೆಯ ವೇಳೆ ಆತ ಕೊಲೆ ಮಾಡಿದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ.

ಬೋಳಂತೂರು ನಿವಾಸಿ ನಾಪತ್ತೆ..!
ಕಳೆದ ಎರಡು ದಿನಗಳಿಂದ ಬೋಳಂತೂರು ನಿವಾಸಿ ಯುವಕ ಸಮಾದ್‌ ನಾಪತ್ತೆಯಾಗಿದ್ದಾನೆ ಎಂಬ ದೂರು ಕೇಳಿಬಂದಿದ್ದು, ಆ ಯುವಕನನ್ನೇ ಕೊಲೆ ಮಾಡಲಾಗಿದೆ.

ಇರಾ ಸೈಟ್‌ನಲ್ಲಿ ಕೊಲೆ ಮಾಡಲಾಗಿದೆ ‌ಎಂಬ ವದಂತಿಗಳು ಹಬ್ಬಿದ್ದು ಪೊಲೀಸರು ಆತನನ್ನು ಸ್ಥಳಕ್ಕೆ ಕರೆದುಕೊಂಡು ಬಂದಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

- Advertisement -

Related news

error: Content is protected !!