Monday, April 29, 2024
spot_imgspot_img
spot_imgspot_img

ವಿಟ್ಲ: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ಭೇದಿಸುವಲ್ಲಿ ಶ್ರಮಿಸಿದ ವಿಟ್ಲ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ಮತ್ತು ನಗದು ಬಹುಮಾನ

- Advertisement -G L Acharya panikkar
- Advertisement -

ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಕರಣವನ್ನು ಭೇಧಿಸುವಲ್ಲಿ ಶ್ರಮಿಸಿದ ವಿಟ್ಲ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಹೆಚ್‌ ಇ ನಾಗರಾಜು ಸೇರಿದಂತೆ 4 ಸಿಬ್ಬಂದಿಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಪರವಾಗಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ರವರು ಪ್ರಶಂಸನಾ ಪತ್ರ ಮತ್ತು ನಗದು ನೀಡಿ ಗೌರವಿಸಿದ್ದಾರೆ.

ವಿಟ್ಲ ಪೊಲೀಸ್ ಠಾಣೆಯ ಉದಯ ರೈ, ರಕ್ಷಿತ್ ರೈ, ಹೇಮರಾಜ್, ಸಂತೋಷ್‌ ಇವರಿಗೆ ಪ್ರಶಂಸನಾ ಪತ್ರ ಮತ್ತು ನಗದು ನೀಡಿ ಗೌರವಿಸಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 15 ದಿನಗಳ ನಿರಂತರ ಕಾರ್ಯಾಚರಣೆ ಬಳಿಕ 7 ಮಂದಿ ಸಂಚುಕೋರರನ್ನು ಹಾಗೂ 3 ಮಂದಿ ಪ್ರಮುಖ ಆರೋಪಿಗಳನ್ನು ಪೊಲೀಸರ ಆರು ತಂಡಗಳು ಬಂಧಿಸುವಲ್ಲಿ ಯಶಸ್ವಿಯಾಗಿತ್ತು.

ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ್ ಸೋನಾವಣೆ, ಪೊಲೀಸ್ ಅಧಿಕಾರಿಗಳಾದ ಕುರ್ಮಾಚಂದ್ರ ಹಾಗೂ ಮತ್ತಿರರು ಉಪಸ್ಥಿತರಿದ್ದರು.

- Advertisement -

Related news

error: Content is protected !!