ವಿಟ್ಲ: ಜಯ ಕರ್ನಾಟಕ ಜನಪರ ವೇದಿಕೆ ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ನೇತೃತ್ವದಲ್ಲಿ, ವಿಟಿವಿ ಸಹಭಾಗಿತ್ವದಲ್ಲಿ 66ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆಸಲಾದ “ರಾಜ್ಯಮಟ್ಟದ ಜಯಕರ್ನಾಟಕ ಜನಪರ ವೇದಿಕೆ ಗಾಯನ ರತ್ನ ಸ್ಪರ್ಧೆ”ಯ ಬಹುಮಾನ ವಿತರಣೆ ಕಾರ್ಯಕ್ರಮವು ಇದೇ ಬರುವ ಫೆ. 26 ರಂದು ವಿಟ್ಲದ ವಿಠ್ಠಲ ಪದವಿಪೂರ್ವ ಕಾಲೇಜಿನ ಸುವರ್ಣ ರಂಗಮಂದಿರದಲ್ಲಿ ನಡೆಯಲಿದೆ.
೨೬-೦೨-೨೦೨೨ನೇ ಶನಿವಾರ ಬೆಳಗ್ಗೆ 11:30 ಕ್ಕೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಮಹಾ ಪ್ರಧಾನ ಸಂಚಾಲಕ ಶೆ ಬೋ ರಾಧಾಕೃಷ್ಣ ವಹಿಸಿಕೊಳ್ಳಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಟ್ಲ ಪಟ್ಟಣ ಪಂಚಾಯತ್ನ ಮುಖ್ಯಾಧಿಕಾರಿ ಮಾಲಿನಿ, ವಿಠಲ ವಿದ್ಯಾ ಸಂಘದ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್, ವಿಠಲ ವಿದ್ಯಾ ಸಂಘದ ಸಂಚಾಲಕ ಎಲ್ ಎನ್ ಕೂಡೂರು, ವಿಠಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ವಿಟ್ಲ ಪಟ್ಟಣ ಪಂಚಾಯತ್ನ ಸದಸ್ಯ ರವಿಪ್ರಕಾಶ್ ವಿಟ್ಲ ಆಗಮಿಸಲಿದ್ದಾರೆ.
ಇದನ್ನೂ ಓದಿ: “ರಾಜ್ಯಮಟ್ಟದ ಜಯಕರ್ನಾಟಕ ಜನಪರ ವೇದಿಕೆ ಗಾಯನ ರತ್ನ ಸ್ಪರ್ಧೆ”ಯ ಫಲಿತಾಂಶ ಪ್ರಕಟ
ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಂಚಾಲಕ ರಾಮ್ದಾಸ್ ವಿಟ್ಲ, ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಂಘಟನೆ ಕಾರ್ಯದರ್ಶಿ ಗೋಪಿ, ಜಯಕರ್ನಾಟಕ ಜನಪರ ವೇದಿಕೆಯ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ಶೆಟ್ಟಿ ತಿಂಗಳಾಡಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯೆ ಕಾವ್ಯ ಶೆಟ್ಟಿ, ಬೆಂಗಳೂರು ಜಿಲ್ಲಾ ಸಂಘಟನಾ ಕಾರ್ಯದರ್ಶಿ ನೀಲಕಂಠೇ ಗೌಡ ಘನ ಉಪಸ್ಥಿತಿ ವಹಿಸಿಕೊಳ್ಳಲಿದ್ದಾರೆ.
ಕಾರ್ಯಕ್ರಮದ ನಂತರ ಪ್ರಸಿದ್ಧ ಕರಾಟೆ ಪಟು ಕಾರ್ತಿಕ್ ಎಸ್ ಕಟೀಲ್ ಹಾಗೂ ಶೋಭಲತಾ ಇವರಿಂದ ಮಹಿಳೆಯರ ಮತ್ತು ಮಕ್ಕಳ ಸುರಕ್ಷತಾ ಪ್ರಾತ್ಯಕ್ಷಿತೆ ನಡೆಯಲಿದೆ.