Monday, April 29, 2024
spot_imgspot_img
spot_imgspot_img

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಇದರ ಆಶ್ರಯದಲ್ಲಿ ಶ್ರೀ ಸತ್ಯ ನಾರಾಯಣ ಪೂಜೆ, ಸಭಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ

- Advertisement -G L Acharya panikkar
- Advertisement -
vtv vitla

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ, ಶಾಂತಿನಗರ ವಿಟ್ಲ ಇದರ ಆಶ್ರಯದಲ್ಲಿ ಶ್ರೀ ಸತ್ಯ ನಾರಾಯಣ ಪೂಜೆ, ಸಭಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ಡಿ.18ರಂದು ವಿಟ್ಲ ಶಾಂತಿನಗರ ಅಕ್ಷಯ ಶ್ರೀಮತಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಂಗಣದಲ್ಲಿ ನಡೆಯಿತು.

ಬೆಳಿಗ್ಗೆ ಗಣಪತಿಹೋಮ ಮತ್ತು ಶ್ರೀ ಸತ್ಯ ನಾರಾಯಣ ಪೂಜೆ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಒಕ್ಕ ಲಿಗರ ಸಂಘ ಬೆಂಗಳೂರು ಇದರ ಉಪಾಧ್ಯಕ್ಷ ಡಾ.ಕೆ.ವಿ ರೇಣುಕಾ ಪ್ರಸಾದ್ ಮಾತನಾಡಿ ಒಕ್ಕಲಿಗ ಸಮುದಾಯ ಈ ಸಮಾಜಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದು ಸಮಾಜದ ಅಭಿವೃದ್ಧಿಯಲ್ಲಿ ಒಕ್ಕಲಿಗ ಸಂಘದ ಪಾತ್ರ ಬಹಳಷ್ಟಿದೆ ಎಂದು ಹೇಳಿದರು. ನಮ್ಮ ಸಂಸ್ಕೃತಿ, ಪರಂಪರೆಯನ್ನು ಮುಂದಿನ ಪೀಳಿಗೆಗೂ ಉಳಿಸಿಕೊಡುವ ಕಾರ್ಯ ನಮ್ಮಿಂದಾಗಬೇಕು. ವಿಟ್ಲ ಒಕ್ಕಲಿಗರ ಸಂಘವು ಒಗ್ಗಟ್ಟಿನಿಂದ ಉತ್ತಮ ಕೆಲಸಕಾರ್ಯಗಳನ್ನು ಮಾಡುತ್ತಿರುವುದು ಪ್ರಶಂಸನೀಯ. ಇಲ್ಲಿಗೆ ನಾನು ನಿರಂತರ ಸಹಕಾರವನ್ನು ನೀಡುತ್ತಾ ಬಂದಿದ್ದೇ ನೆ ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಒಕ್ಕಲಿಗ ಸಂಘದ ಸದಸ್ಯತ್ವ ಅಭಿಯಾನ ಜನವರಿ 16ರಂದು ಆನ್ಲೈನ್ ಮೂಲಕ ಪ್ರಾರಂಭಗೊಳ್ಳಲಿದ್ದು ಇದರಲ್ಲಿ ಸದಸ್ಯರಾಗಲು ಬಾಕಿಯಿರುವ ಸಮಾಜ ಬಾಂಧವರೆಲ್ಲರೂ ಸದಸ್ಯರಾಗಬೇಕು ಎಂದು ಡಾ.ಕೆ.ವಿ ರೇಣುಕಾ ಪ್ರಸಾದ್ ಮನವಿ ಮಾಡಿದರು.

ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ವಿಟ್ಲ ಇದರ ಗೌರವಾಧ್ಯಕ್ಷ ಮೋಹನ್ ಕಾಯರ್‌ಮಾರ್‍ ಮಾತನಾಡಿ ಒಕ್ಕ ಲಿಗ ಸಂಘದ ಮೂಲಕ ಒಂದೇ ತಾಯಿಯ ಮಕ್ಕಳಂತೆ ನಾವೆಲ್ಲರೂ ಸೇರಿಕೊಂಡು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಮಾಜದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು ಒಗ್ಗಟ್ಟಿನಿಂದ ಕೆಲಸ ಕಾರ್ಯಗಳು ನಡೆಯುತ್ತಿದೆ. ಮುಂದಕ್ಕೂ ಒಕ್ಕಲಿಗ ಸಂಘವು ಒಗ್ಗಟ್ಟಿನ ಮೂಲಕ ಈ ಸಮಾಜಕ್ಕೆ ಮಾದರಿಯಾಗಿ ಮುಂದುವರಿಯಬೇಕು ಎಂದು ಅವರು ಹೇಳಿದರು.

ಸಭಾಧ್ಯಕ್ಷತೆ ವಹಿಸಿದ್ದ ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷ ಕೆ.ಮೋನಪ್ಪ ಗೌಡ ಶಿವಾಜಿನಗರ ಮಾತನಾಡಿ ನಮ್ಮ ಒಕ್ಕಲಿಗ ಸಂಘವು ವ್ಯವಸ್ಥಿತವಾಗಿ ಮತ್ತು ಮಾದರಿಯಾಗಿ ಕಾರ್ಯಾಚರಿಸುತ್ತಿದ್ದು ವಿವಿಧ ಯೋಜನೆಗಳನ್ನು ಹಾಕಿಕೊಂಡು ಅದನ್ನು ಅನುಷ್ಠಾನಗೊಳಿಸುತ್ತಾ ಉತ್ತಮವಾಗಿ ಮುನ್ನ ಡೆಯುತ್ತಿದೆ ಎಂದು ಹೇಳಿದರು. ಸಂಘದ ಸದಸ್ಯರಿಗೆ ಸಹಾಯ ಹಸ್ತ ನೆಲೆಯಲ್ಲಿ `ಆಪತ್ತು ನಿಧಿ’ಯನ್ನು ಪ್ರಾರಂಭಿಸಲಾಗಿದೆ ಎಂದ ಅವರು ಸಂಘದಲ್ಲಿ ನಮ್ಮ ಸಮಾಜದ ಪ್ರತಿಯೋರ್ವರೂ ಸದಸ್ಯತ್ವ ಪಡೆದುಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಒಕ್ಕಲಿಗ ಸ್ವ -ಸಹಾಯ ಟ್ರಸ್ಟ್ ಪುತ್ತೂರು ಇದರ ಅಧೀನದಲ್ಲಿ ಕುಳ, ಇಡ್ಕಿದು, ನೆಟ್ಲಮುಡ್ನೂರು, ಕೆದಿಲ, ಪುಣಚ, ಬಿಳಿಯೂರು ಪೆರ್ನೆ, ವಿಟ್ಲಮುಡ್ನೂರು ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟಗಳ ಪದಗ್ರಹಣ ನಡೆಯಿತು. ಒಕ್ಕಲಿಗ ಸ್ವ-ಸಹಾಯ ಟ್ರ ಸ್ಟ್ ಪುತ್ತೂರು ಇದರ ಅಧ್ಯ ಕ್ಷ ಮನೋಹರ ಡಿ.ವಿ ಅವರು ಸ್ವ-ಸಹಾಯ ಟ್ರಸ್ಟ್‌ನ ಕಾರ್ಯ ಚಟುವಟಿಕೆಗಳ ಬಗ್ಗೆ ವಿವರಿಸಿದರು. ಮೇಲ್ವಿಚಾರಕಿ ಸುಮಲತಾ ಕಾರ್ಯಕ್ರಮ ನಿರ್ವಹಿಸಿದರು.

ಬಂಟ್ವಾಳ ತಾಲೂಕು ಉತ್ತಮ ಶಿಕ್ಷಕ ಪ್ರ ಶಸ್ತಿ ಪುರಸ್ಕೃತ, ಚಂದಳಿಗೆ ಹಿ.ಪ್ರಾ.ಶಾಲೆಯ ಶಿಕ್ಷಕ ವಿಶ್ವ ನಾಥ ಗೌಡ ಕುಳಾಲ್ ಅವರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ನಂತರ ನೆಟ್ಬಾಲ್ ಪಂದ್ಯಾಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಶ್ರೀನಿವಾಸ ಗೌಡ ಅಳಿಕೆ, ಹಾಗೂ ಅಗ್ನಿ ವೀರರಾಗಿ ನೇಮಕಾತಿ ಹೊಂದಿರುವ ಉಲ್ಲಾಸ್ ಅನಂತಾಡಿ ಮತ್ತು ಸಚಿನ್ ಮೈರ ಅವರನ್ನು ಗೌರವಿಸಲಾಯಿತು. ಸಂಘಕ್ಕೆ ಕೊಡುಗೆ, ದೇಣಿಗೆ ನೀಡಿದವರನ್ನೂ ಇದೇ ಸಂದರ್ಭದಲ್ಲಿ ಗೌರವಿಸಲಾಯಿತು.

ಶಿಕ್ಷಣ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಒಕ್ಕ ಲಿಗ ಸಮಾಜದ ಪ್ರತಿಭೆಗಳನ್ನು ಗುರುತಿಸಿ ಗೌರವಿಸಲಾಯಿತು.

ಸಭಾಭವನದ ಭೋಜನಾಲಯಕ್ಕೆ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ಇದರ ಉಪಾಧ್ಯ ಕ್ಷ ಡಾ.ಕೆ.ವಿ ರೇಣುಕಾ ಪ್ರಸಾದ್ರವರು ದೇಣಿಗೆಯಾಗಿ ನೀಡಿದ್ದ ರೂ. 5 ಲಕ್ಷ ವೆಚ್ಚ ದಲ್ಲಿ ಗ್ರಾನೈಟ್‌ನ್ನು ಅಳವಡಿಸಲಾಗಿದ್ದು ಅದನ್ನು ದ.ಕ ಜಿಲ್ಲಾ ಗೌಡ ಸೇವಾ ಸಂಘ ಮಂಗಳೂರು ಇದರ ಅಧ್ಯಕ್ಷ ಲೋಕಯ್ಯ ಗೌಡ ಉದ್ಘಾ ಟಿಸಿದರು.

ವೇದಿಕೆಯಲ್ಲಿ ಮಂಗಳೂರು ತಾಲೂಕು ಒಕ್ಕಲಿಗ ಸೇವಾ ಸಂಘದ ಅಧ್ಯಕ್ಷ ಸದಾನಂದ ಗೌಡ, ದ.ಕ ಜಿಲ್ಲಾ ಗೌಡ ಸೇವಾ ಸಂಘ ಮಂಗಳೂರು ಇದರ ಅಧ್ಯಕ್ಷ ಲೋಕಯ್ಯ ಗೌಡ, ಒಕ್ಕಲಿಗ ಸಂಘ ಬಂಟ್ವಾಳ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಜಲಜಾಕ್ಷಿ , ಒಕ್ಕಲಿಗ ಸಂಘ ಯುವವೇದಿಕೆ ಬಂಟ್ವಾಳ ತಾಲೂಕು ಇದರ ಕಾರ್ಯದರ್ಶಿ ವೇಣುಕುಮಾರ್ ಸಿ.ಎಚ್, ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ ಪುತ್ತೂರು ಇದರ ಅಧ್ಯಕ್ಷ ಮನೋಹರ ಡಿ.ವಿ ಉಪಸ್ಥಿತರಿದ್ದರು. ಸಭೆಯಲ್ಲಿ ಸಂಘದ ಮೇಲ್ವಿ ಚಾರಕಿ ಸುಮಲತಾ, ಪ್ರೇರಕಿಯರಾದ ನಮಿತಾ ಮತ್ತು ಮೋಹಿನಿ ಉಪಸ್ಥಿತರಿದ್ದರು. ಒಕ್ಕಲಿಗ ಸ್ವ -ಸಹಾಯ ಟ್ರಸ್ಟ್ ಪುತ್ತೂರು ಇದರ ಕಾರ್ಯದರ್ಶಿ ದಿವ್ಯ ಪ್ರಸಾದ್, ಸಲಹಾ ಸಮಿತಿ ಸದಸ್ಯ ವೆಂಕಪ್ಪ ಗೌಡ ಮತ್ತಿತರರು ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

ಕೃಪಾ ದೇವರಮನೆ ಪ್ರಾರ್ಥಿಸಿದರು. ಮೋಹನ್ ಕಾಯರ್‌ಮಾರ್ ಸ್ವಾಗತಿಸಿದರು. ಜಲಜಾಕ್ಷಿ ವಂದಿಸಿದರು. ಯತೀಶ್, ಲೀಲಾ, ತನುಜಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ನೂರಾರು ಮಂದಿ ಭಾಗವಹಿಸಿದ್ದರು.

- Advertisement -

Related news

error: Content is protected !!