Saturday, May 4, 2024
spot_imgspot_img
spot_imgspot_img

ವಿಟ್ಲ: ಬಲ್ಲಮಲೆ ರಕ್ಷಿತಾರಣ್ಯದಲ್ಲಿ ಅಗ್ನಿ ಅವಘಡ – ಮುಂದುವರಿದ ಬೆಂಕಿ ನಂದಿಸುವ ಕಾರ್ಯಚರಣೆ

- Advertisement -G L Acharya panikkar
- Advertisement -

ವೀರಕಂಭ: ಆಕಸ್ಮಿಕವಾಗಿ ಗುಡ್ಡಕ್ಕೆ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಕೆಲಿಂಜ ಬಲ್ಲಮಲೆ ರಕ್ಷಿತಾರಣ್ಯದಲ್ಲಿ ನಡೆದಿದೆ.

ಮೀಸಲು ಅರಣ್ಯ ಇಲಾಖೆಗೆ ಸೇರಿದ ಗುಡ್ಡ ಇದಾಗಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ. ಈ ಕಾಡಿನಲ್ಲಿ ಕೋಟ್ಯಾಂತರ ಬೆಲೆಬಾಳುವ ವಿವಿಧ ಜಾತಿಯ ಮರಗಳಿದ್ದು, ಬಹುತೇಕ ಸಣ್ಣ ಮರಗಳು ಬೆಂಕಿಗಾಹುತಿಯಾಗಿವೆ ಎನ್ನಲಾಗಿದೆ.

ಅರಣ್ಯ ಇಲಾಖೆ ಸಿಬ್ಬಂಧಿಗಳು ಹಾಗೂ ಮಂಗಳೂರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

- Advertisement -

Related news

error: Content is protected !!