Thursday, May 16, 2024
spot_imgspot_img
spot_imgspot_img

ವಿಟ್ಲ: ಬಸ್ಸು ಮತ್ತು ದ್ವಿಚಕ್ರ ವಾಹನ ಅಪಘಾತ; ಪೊಲೀಸ್ ಸಿಬ್ಬಂದಿಗೆ ಗಂಭೀರ ಗಾಯ

- Advertisement -G L Acharya panikkar
- Advertisement -

ವಿಟ್ಲ: ಬಸ್ಸು ಮತ್ತು ದ್ವಿಚಕ್ರ ವಾಹನ ಅಪಘಾತಕ್ಕೀಡಾಗಿ ಪೊಲೀಸ್ ಸಿಬ್ಬಂದಿ ಗಂಭೀರ ಗಾಯಗೊಂಡ ಘಟನೆ ಪುತ್ತೂರು – ಮಂಗಳೂರು ರಸ್ತೆಯ ಕೊಡಾಜೆ ಎಂಬಲ್ಲಿ ನಡೆದಿದೆ.

ಫಲ್ಗುಣಿ ಬಸ್ಸು ಚಾಲಕನ ಅಜಾಗರೂಕತೆಯಿಂದ ಈ ಅವಘಡ ಸಂಭವಿಸಿದೆ. ಬೈಕ್‌ನಲ್ಲಿ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಧರ್ಣಪ್ಪ ಗೌಡ ಮತ್ತು ಅವರ ಮಗಳು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಗಂಭೀರ ಗಾಯಗೊಂಡ ಧರ್ಣಪ್ಪ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

- Advertisement -

Related news

error: Content is protected !!