ಬೆಳ್ತಂಗಡಿ ಠಾಣೆಯಲ್ಲಿ ಪಿಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿರುವ ಸಂದೀಪ್ ಕುಮಾರ್ ಶೆಟ್ಟಿ ವಿಟ್ಲ ಪೊಲೀಸ್ ಠಾಣೆಗೆ ವರ್ಗಾವಣೆ ಗೊಳಿಸುವಂತೆ ಮಂಗಳೂರು ಪೊಲೀಸ್ ಮಹಾನಿರೀಕ್ಷಕರು ಆದೇಶ ಹೊರಡಿಸಿದ್ದಾರೆ.
ಈ ಬಗ್ಗೆ ಅಧೀಕೃತ ಆದೇಶ ಹೊರಡಿಸಿರುವ ಪೊಲೀಸ್ ಮಹಾನಿರೀಕ್ಷಕರಾದ ಐಪಿಎಸ್ ದಿವ್ಯಜ್ಯೋತಿ ರೈ ಕರ್ತ್ಯವ್ಯ ನಿರ್ವಹಿಸುತ್ತಿರುವ ಸ್ಥಳದಿಂದ ವಿಟ್ಲ ಪೊಲೀಸ್ ಠಾಣೆಗೆ ವರ್ಗಾವಣೆಗೊಳಿಸಲು ಆದೇಶಿಸಿದ್ದಾರೆ. ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮುಂದಿನ ಆದೇಶದವರೆಗೆ ಮಾರ್ಪಡಿಸಿ ವರ್ಗಾಯಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
2018 ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡ ಸಂದೀಪ್ ಕುಮಾರ್ ಶೆಟ್ಟಿಯವರು ಮೈಸೂರಿನಲ್ಲಿ ಟ್ರೈನಿಂಗ್ ಪಡೆದು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರೊಬೆಷನರಿ ಎಸ್.ಐ. ಆಗಿ ಕರ್ತವ್ಯ ನಿರ್ವಹಿಸಿದ್ದರು. ವಿಟ್ಲ ಠಾಣಾ ಎಸ್.ಐ. ಆಗಿದ್ದ ವಿನೋದ್ ಕುಮಾರ್ ರೆಡ್ಡಿಯವರನ್ನು ಉತ್ತರ ಕನ್ನಡ ಜಿಲ್ಲೆಯ ರಾಮನಗರ ಠಾಣೆಗೆ ವರ್ಗಾವಣೆಗೊಳಿಸಲಾಗಿದ್ದು, ಇದೀಗ ತೆರವಾಗಿದ್ದ ಅವರ ಸ್ಥಾನಕ್ಕೆ ಸಂದೀಪ್ ಕುಮಾರ್ ಶೆಟ್ಟಿಯವರನ್ನು ನೇಮಕ ಮಾಡಲಾಗಿದೆ. ಸಂದೀಪ್ ಕುಮಾರ್ ಶೆಟ್ಟಿಯವರು ಉಡುಪಿ ಜಿಲ್ಲೆಯ ಕುಂದಾಪುರ ನಿವಾಸಿಯಾಗಿದ್ದಾರೆ.
ವಿಟ್ಲ ಪೊಲೀಸ್ ಠಾಣೆಯು ಮೇಲ್ದರ್ಜೆಗೆ ಏರಿದ್ದು ಇತ್ತೀಚಿಗೆ ವಿಟ್ಲ ಠಾಣಾ ನೂತನ ಇನ್ಸ್ಪೆಕ್ಟರ್ ಆಗಿ ನಾಗರಾಜ್ ಹೆಚ್.ಇ ಅಧಿಕಾರ ಸ್ವೀಕರಿಸಿದ್ದರು. ಅಂತೆಯೇ ಈ ಹಿಂದೆ ಠಾಣೆಯಲ್ಲಿ ಪಿಎಸ್ಐ ಆಗಿ ವಿನೋದ್ ಕುಮಾರ್ ರೆಡ್ಡಿ ಕರ್ತವ್ಯ ನಿರ್ವಹಿಸಿದ್ದರು.