Tuesday, May 7, 2024
spot_imgspot_img
spot_imgspot_img

ವಿಟ್ಲ: ಜೀವ ಬೆದರಿಕೆ ಹಾಕಿ, ಬೆಂಕಿ ಹಚ್ಚಿದ ಪ್ರಕರಣ; ಆರೋಪಿ ರಝಾಕ್‌ನನ್ನು ಬಂಧಿಸಿದ ವಿಟ್ಲ ಪೊಲೀಸರು..!

- Advertisement -G L Acharya panikkar
- Advertisement -
vtv vitla

ವಿಟ್ಲ: ಮನೆಗೆ ನುಗ್ಗಿ ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಹಾಕಿ ಕಟ್ಟಿಗೆ ಸಂಗ್ರಹಿಸಿದ್ದ ಕೊಠಡಿಗೆ ಬೆಂಕಿ ಹಚ್ಚಿದ ಓರ್ವ ಆರೋಪಿನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಸೇರಾಜೆ ನಿವಾಸಿ ಅಬ್ದುಲ್‌ ರಝಾಕ್‌ ಎಂ(42) ಬಂಧಿತ ಆರೋಪಿ.

ಮಾ.26 ರಂದು ಕರೋಪ್ಪಾಡಿ ಗ್ರಾಮದ ಕೆದುಮೂಲೆ ಎಂಬಲ್ಲಿ ಮಹಿಳೆಯ ಜಾಗದಲ್ಲಿ ಹಾಕಲಾಗಿದ್ದ ಮೋರಿಯನ್ನು ನೆರೆವಾಸಿಗಳಾದ ರಝಾಕ್ ಹಾಗೂ ಮೂಸೆ ಕಲಿಂ ರವರು ತೆಗೆಯುತ್ತಿದ್ದು, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮಹಿಳೆಯ ತಂದೆಯನ್ನು ದೂಡಿ ಹಾಕಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ.

ಮಾ.27 ರಂದು ಆರೋಪಿಗಳು ಮಹಿಳೆಯ ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ ಮನೆಯ ಕಿಟಕಿಯನ್ನು ಒಡೆದು ಮಹಿಳೆಯನ್ನು ಮತ್ತು ಮನೆಯವರನ್ನು ಉದ್ದೇಶಿಸಿ ಅವಾಚ್ಯ ಶಬ್ದಗಳಿಂದ ಬೈದು ಮಹಿಳೆಯ ಮನೆಗೆ ತಾಗಿಕೊಂಡಿರುವ ಕಟ್ಟಿಗೆ ಸಂಗ್ರಹಿಸುವ ಕೊಠಡಿಗೆ ಬೆಂಕಿ ಹಚ್ಚಿ ನಿಮ್ಮನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿ ಓಡಿ ಹೋಗಿದ್ದು , ಈ ಘಟನೆಯಿಂದ ಮಹಿಳೆ ಕಟ್ಟಿಗೆ ಸಂಗ್ರಹಿಸುವ ಕೊಠಡಿ ಸಂಪೂರ್ಣ ಸುಟ್ಟು ಹೋಗಿದ್ದಲ್ಲದೆ ಮನೆಯ ಕಿಟಕಿಯ ಗಾಜು ಪುಡಿಯಾಗಿ ಒಟ್ಟು 25,000/- ರೂ. ನಷ್ಟವಾಗಿರುತ್ತದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

- Advertisement -

Related news

error: Content is protected !!