Saturday, June 28, 2025
spot_imgspot_img
spot_imgspot_img

ವಿಟ್ಲ: ಮನೆಗೆ ಸಿಡಿಲು ಬಡಿದು ಮೂವರಿಗೆ ಗಾಯ; ಅಪಾರ ಹಾನಿ

- Advertisement -
- Advertisement -

ವಿಟ್ಲ: ಮನೆಗೆ ಸಿಡಿಲು ಬಡಿದು ಮೂವರು ಗಾಯಗೊಂಡು ಮನೆ ಭಾಗಶಃ ಹಾನಿಗೊಂಡ ಘಟನೆ ವೀರಕಂಬ ಗ್ರಾಮದ ಕಲ್ಮಲೆ ಎಂಬಲ್ಲಿ ಸಂಭವಿಸಿದೆ.

ಜಯಂತಿ ಮತ್ತು ಮಕ್ಕಳಾದ ಪ್ರಜೀತಾ(19) ರಕ್ಷಿತ (24) ಅವರು ಗಾಯಗೊಂಡಿದ್ದು, ವಿಟ್ಲ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವೀರಕಂಬ ಕಲ್ಮಲೆ ಜಯಂತಿ ಮತ್ತು ರಘುನಾಥ ಶೆಟ್ಟಿ ದಂಪತಿಗಳ ಮನೆಗೆ ಸಂಜೆ ವೇಳೆ ಸಂಭವಿಸಿದ ಭಾರೀ ಸಿಡಿಲು ಅವರ ಮನೆಗೆ ಬಡಿದಿದೆ. ಇದರಿಂದ ಮನೆ ಭಾಗಶಃ ಹಾನಿಗೊಂಡಿದೆ. ಮನೆಯಲ್ಲಿದ್ದ ವಿದ್ಯುತ್ ಉಪಕರಣಗಳು ಸಂಪೂರ್ಣವಾಗಿ ನಾಶಗೊಂಡಿದೆ.

ಮನೆಯ ಗೋಡೆಗಳು ಬಿರುಕುಗೊಂಡಿದೆ. ಹಂಚುಗಳು ಹಾನಿಗೊಂಡಿದೆ. ಘಟನೆಯಿಂದ ತೀವ್ರ ಆಘಾತಗೊಳಗಾದ ಮೂವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ವೀರಕಂಬ ಗ್ರಾಮ ಕರಣಿಕ ಕರಿಬಸಪ್ಪ ಭೇಟಿ ನೀಡಿದ್ದಾರೆ.

- Advertisement -

Related news

error: Content is protected !!