- Advertisement -
- Advertisement -
ವಿಟ್ಲ: ಮನೆಯ ಅಂಗಳದಲ್ಲಿ ಒಣ ಹಾಕಿದ ಅಡಿಕೆಯನ್ನು ಕಳವುಗೈದ ಘಟನೆ ಬಂಟ್ವಾಳ ತಾಲೂಕು ಕೊಳ್ಳಾಡು ಗ್ರಾಮದ ನೀರಪಳಿಕೆ ಬಾರೆಬೆಟ್ಟು ಎಂಬಲ್ಲಿ ನಡೆದಿದೆ.
ಬಾರೆಬೆಟ್ಟು ನಿವಾಸಿ ಮಹಮ್ಮದ್ ಮುಸ್ತಾಫ್ ಎಂಬವರ ಮನೆಯ ಅಂಗಳದಲ್ಲಿ ಒಣ ಹಾಕಿದ ಸುಮಾರು 3500 ಅಡಿಕೆಯನ್ನು ಫೆ.7ರಂದು ಯಾರೋ ಕಳ್ಳರು ಕದ್ದೊಯ್ದಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಮಂಗಳೂರು ತಾಲೂಕು ಕಣ್ಣೂರು ಗ್ರಾಮದ ಗಾಣದಬೆಟ್ಟು ಎಂಬಲ್ಲಿನ 4 ಜನ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರು ಈ ಕೃತ್ಯವನ್ನು ಎಸಗಿರುವುದು ಪೊಲೀಸರಿಗೆ ತಿಳಿದು ಬಂದಿದೆ.
ಕಳವುಗೈದ ಸುಮಾರು 3500 ಅಡಿಕೆ ಹಾಗೂ ಪ್ರಕರಣದಲ್ಲಿ ಶಾಮೀಲಾದ 2 ಮೋಟಾರು ಸೈಕಲ್ ಗಳನ್ನು ಪೊಲೀಸರು ವಶಕ್ಕೆ ಪಡೆದು ಕಾನೂನು ಕ್ರಮಕೈಗೊಂಡಿದ್ದಾರೆ.
- Advertisement -