ವಿಟ್ಲ: ಕನ್ಯಾನ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಹಿಮಾನ್ ಎಂಬಾತ ಮಹಿಳೆಯೋರ್ವರ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿ, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಪಿಲಿಚಂಡಿಗುಡ್ಡೆ ಎಂಬಲ್ಲಿ ನಡೆದಿದೆ.
ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಪಿಲಿಚಂಡಿಗುಡ್ಡೆಯಲ್ಲಿ ವಾಸವಿರುವ ಮಹಿಳೆಯೋರ್ವರ ಮನೆಗೆ ನೀರಿನ ಸಂಪರ್ಕದ ಬಗ್ಗೆ ಕನ್ಯಾನ ಪಂಚಾಯತ್ ನ ಪಿಡಿಓ ಮತ್ತು ಸಿಬ್ಬಂದಿ ಬಂದು ನೀರಿನ ಸಂಪರ್ಕ ಕಡಿತಗೊಳಿಸುವ ಬಗ್ಗೆ ಅಧ್ಯಕ್ಷರು ತಿಳಿಸಿರುತ್ತಾರೆ ಎಂದು ಹೇಳಿದ್ದಾರೆ. ಈ ವೇಳೆ ಮಹಿಳೆ ನೀರಿನ ಬಿಲ್ ಪಾವತಿಸಿರುವುದಾಗಿ ತಿಳಿಸಿದ್ದು, ನೀರಿನ ಸಂಪರ್ಕವನ್ನು ಕಡಿತಗೊಳಿಸದೆ ವಾಪಸು ಹೋಗಿದ್ದಾರೆ.
ಜೂನ್ 16 ರಂದು ಮಹಿಳೆಯ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಂದ ಕನ್ಯಾನ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಹಿಮಾನ್ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ಪ್ರತಿಭಟಿಸಿದ್ದು, ಆಕೆಯ ಮೇಲೆ ಹಲ್ಲೆ ನಡೆಸಿ ಯಾರಿಗೂ ತಿಳಿಸದಂತೆ ಜೀವ ಬೆದರಿಕೆ ಹಾಕಿದ್ದಾನೆ.
ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.