Thursday, April 25, 2024
spot_imgspot_img
spot_imgspot_img

ವಿಟ್ಲ: ಮಾಣಿ ವಲಯ ಜನ ಜಾಗೃತಿ ವೇದಿಕೆ ಅಧ್ಯಕ್ಷರಾಗಿ ಪಿ. ರಾಜಾರಾಮ ಶೆಟ್ಟಿ ಕೋಲ್ಪೆ ಗುತ್ತು ಆಯ್ಕೆ

- Advertisement -G L Acharya panikkar
- Advertisement -

ವಿಟ್ಲ: ಮಾಣಿ ವಲಯ ಜನ ಜಾಗೃತಿ ವೇದಿಕೆ ಅಧ್ಯಕ್ಷರಾಗಿ ಪಿ. ರಾಜಾರಾಮ ಶೆಟ್ಟಿ ಕೋಲ್ಪೆ ಗುತ್ತುರವರು ಆಯ್ಕೆಯಾಗಿದ್ದಾರೆ. ಸೆ. 21ರಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ಕೃಷ್ಣಯ್ಯ ವಿಟ್ಲರವರ ಅಧ್ಯಕ್ಷತೆಯಲ್ಲಿ ನಡೆದ ಜನ ಜಾಗೃತಿ ವೇದಿಕೆಯ ಸಭೆಯಲ್ಲಿ ಈ ಆಯ್ಕೆ ಪ್ರಕ್ರೀಯೆ ನಡೆಯಿತು.

ದಕ್ಷಿಣ ಕನ್ನಡ 2ರ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ , ನಿರ್ದೇಶಕ ಪ್ರವೀಣ್ ಕುಮಾರ್, ನವೀನ್ ಕುಮಾರ್ ಪೆರ್ನೆ, ಡಾ. ಮನೋಹರ್, ಎರುಂಬು ಬಾಲಕೃಷ್ಣ ಕಾರಂತ, ಬಟ್ಯಪ್ಪ ಶೆಟ್ಟಿ, ದೇವಿದಾಸ್ ಶೆಟ್ಟಿ, ತಾರಾನಾಥ್ ಶೆಟ್ಟಿ, ನಟೇಶ್ ವಿಟ್ಲ, ಮಾಣಿ ಮೇಲ್ವಿಚಾರಕಿ ಪ್ರೇಮ, ಸುಗಂಧಿನಿ ಮೊದಲಾದವರು ಉಪಸ್ಥಿತರಿದ್ದರು.

ವಿಟ್ಲ ಮೇಲ್ವಿಚಾರಕಿ ವಿನೋದ ಕಾರ್ಯಕ್ರಮ ನಿರೂಪಿಸಿದರು‌. ಯೋಜನಾಧಿಕಾರಿ ಚೆನ್ನಪ್ಪ ಗೌಡ ಸ್ವಾಗತಿಸಿದರು. ಅಳಿಕೆ ಮೇಲ್ವಿಚಾರಕ ರಮೇಶ್ ವಂದಿಸಿದರು.

- Advertisement -

Related news

error: Content is protected !!