- Advertisement -
- Advertisement -
ವಿಟ್ಲ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಮಾದಕ ದ್ರವ್ಯ ಸಾಗಾಟ ಮಾಡುತ್ತಿದ್ದ ಓರ್ವನನ್ನು ಬಂಧಿಸಿದ್ದು, ಮತ್ತೋರ್ವ ಆರೋಪಿ ಪರಾರಿಯಾದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕು ಬಾರ್ಯ, ಸೂರ್ಯ ಪಡ್ಡಾಯಿ ನಿವಾಸಿ ಅಬ್ದುಲ್ ಅಜೀಜ್ (30) ಬಂಧಿತ ಆರೋಪಿ. ವಿಟ್ಲ ಮೂಲದ ಬ್ಲೇಡ್ ಸಾಧಿಕ್ ಪರಾರಿಯಾದ ಆರೋಪಿ.
ಆರೋಪಿಯಿಂದ 7.1 ಗ್ರಾಂ ಎಂಡಿಎಂಎ (14,200 ರೂ. ಮೌಲ್ಯದ) ಹಾಗೂ 11,000 ರೂ. ನಗದು, ಒಂದು ಮೊಬೈಲ್ ಫೋನ್ ಅನ್ನು ಸ್ವಾಧಿನಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬ್ಲೇಡ್ ಸಾದಿಕ್ ಕಂಡಲ್ಲಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದೆ.
- Advertisement -