- Advertisement -
- Advertisement -
ವಿಟ್ಲ: ಕಳೆದ 26 ವರ್ಷಗಳಿಂದ ಸಮಾಜಮುಖಿ ಸೇವೆಗಳ ಮೂಲಕ ಪ್ರಸಿದ್ಧಿ ಹೊಂದಿದ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಶ್ರೀ ಮಾರಿಯಮ್ಮ ಯುವಕ ಸಂಘ(ರಿ). ದೇವಿನಗರ ಸೆರ್ಕಳ ವತಿಯಿಂದ 27ನೇ ವಾರ್ಷಿಕೋತ್ಸವದ ಪ್ರಯುಕ್ತ 3-12-2021 ನೇ ಶುಕ್ರವಾರದಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ “ಶ್ರೀ ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ ನಡೆಯಲಿದೆ.
ಮಧ್ಯಾಹ್ನ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಅಲಂಕಾರ ಪೂಜೆ ಮತ್ತು ಮೇಳದ ದೇವರ ಮಹಾಪೂಜೆ, ಅನ್ನಸಂತರ್ಪಣೆ ಬಳಿಕ ಸಂಜೆ ಮಾದಕಟ್ಟೆ ದೇವಸ್ಥಾನದಿಂದ ಶ್ರೀ ಮೇಳದ ದೇವರ ಭವ್ಯ ಮೆರವಣಿಗೆ ಬಳಿಕ ದೇವಿನಗರ ಸೆರ್ಕಳದಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ಮಂಗಳಾರತಿ, ಪ್ರಸಾದ ವಿತರಣೆ, ರಾತ್ರಿ ಚೌಕಿ ಪೂಜೆ ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ.
ರಾತ್ರಿ 8.30 ಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ “ಶ್ರೀ ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ ನಡೆಯಲಿದೆ.
- Advertisement -