ವಿಟ್ಲ : ವಿಟ್ಲದ ಯುವತಿಯೊಬ್ಬಳು ಕೆರೆಗೆ ಹಾರಿ ಸಾವನ್ನಪ್ಪಿದ ಘಟನೆಗೆ ಸಂಬ0ಧಿಸಿದ0ತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ವಿಟ್ಲದ ಪ್ರಶಾಂತ್, ದಿನೇಶ್, ಯಶವಂತ್ ಹಾಗೂ ಕೇಪುವಿನ ರಕ್ಷಿತ್ ಎಂಬುವವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ವಿಟ್ಲ: ನವರಾತ್ರಿಯಂದು ಕುಟುಂಬಕ್ಕೆ ಸೂತಕದ ಛಾಯೆ; ಯುವತಿ ಕೆರೆಗೆ ಹಾರಿ ಆತ್ಮಹತ್ಯೆ..!
ಡೆತ್ ನೋಟ್ ನಲ್ಲಿ ಕೆಲವರ ಹೆಸರು ಉಲ್ಲೇಖ ಮಾಡಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ಅವರಿಂದಾಗಿಯೇ ತಾನು ಸಾವಿಗೆ ಶರಣಾಗುತ್ತಿದ್ದೇನೆ ಎಂದು ಆಕೆ ಬರೆದಿದ್ದಳು. ಈ ಡೆತ್ ನೋಟ್ ನ್ನು ಆಧರಿಸಿ ಯುವತಿಯ ತಾಯಿ ವಿಟ್ಲ ಠಾಣೆಯಲ್ಲಿ ದೂರು ನೀಡಿದ್ದರು. ಅದರಂತೆ ತನಿಖೆ ಕಾರ್ಯಾಚರಣೆ ಆರಂಭಿಸಿದ್ದಾರೆ.
ಅಕ್ಟೋಬರ್ 10 ರಂದು ನಾಪತ್ತೆಯಾಗಿದ್ದ ನಿಶ್ಮಿತಾ (22) ಅವರ ಮೃತದೇಹ ಮರುದಿನ ವಿಟ್ಲದ ಕೆರೆಯಲ್ಲಿ ಪತ್ತೆಯಾಗಿತ್ತು. ಸ್ಥಳದಲ್ಲಿ ಪತ್ತೆಯಾದ ಡೆತ್ ನೋಟ್ನಲ್ಲಿ ಆಕೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿದ ಬಗ್ಗೆ ಉಲ್ಲೇಖಿಸಲಾಗಿದೆ. ಇನ್ನು ಆತ್ಮಹತ್ಯೆ ಬಗ್ಗೆ ಯುವತಿಯ ತಾಯಿ ನೀಡಿದ ದೂರಿನ ಮೇರೆಗೆ ವಿಟ್ಲದ ಪ್ರಶಾಂತ್, ದಿನೇಶ್, ಯಶವಂತ್ ಹಾಗೂ ಕೇಪುವಿನ ರಕ್ಷಿತ್ ಎಂಬುವವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.