ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು, ದಿನಾಂಕ 26-೦6-2022ರಂದು ಕ್ಲಬ್ ನ ಅಧ್ಯಕ್ಷ ಬಿ ಸಂದೇಶ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ವಿಠಲ ಪದವಿಪೂರ್ವ ಕಾಲೇಜಿನ ಸುವರ್ಣ ರಂಗಮಂದಿರದಲ್ಲಿ ನಡೆಯಿತು.
ಪದಗ್ರಹಣ ಅಧಿಕಾರಿಯಾಗಿ ಲಯನ್ಸ್ ಜಿಲ್ಲಾ ಜಿ.ಎಲ್.ಟಿ.ಕೋ ಆರ್ಡಿನೇಟರ್ ಲಯನ್ಸ್ ಕುಡುಪಿ ಅರವಿಂದ ಶೆಣೈ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ, ಕ್ಲಬ್ ನ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಏಳು ಜನ ಹೊಸತಾಗಿ ನೂತನ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ವೇದಿಕೆಯಲ್ಲಿ ಎಸೆಸೆಲ್ಸಿಯಲ್ಲಿ 2021-22ನೇ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ನಮ್ಮ ಕ್ಲಬ್ ನ ಸದಸ್ಯರ ಮಕ್ಕಳನ್ನು ಗೌರವಿಸಲಾಯಿತು.
ವೇದಿಕೆಯಲ್ಲಿ ಲಯನ್ಸ್ ಜಿಲ್ಲಾ ದ್ವಿತೀಯ ಉಪರಾಜ್ಯಪಾಲೆ, ಲಯನ್ಸ್ ಬಿಎಂ ಭಾರತಿ, ಜಿಲ್ಲಾ ಸಂಪುಟ ಕಾರ್ಯದರ್ಶಿ ಲಯನ್ಸ್ ಅನಿಲ್ ಕುಮಾರ್, ಪ್ರಾಂತೀಯ ಅಧ್ಯಕ್ಷ ಹೇಮನಾಥ ಶೆಟ್ಟಿ, ನಿಯೋಜಿತ ಪ್ರಾಂತಿಯ ಅಧ್ಯಕ್ಷ ಲಯನ್ಸ್ ಸುದರ್ಶನ್ ಪಡಿಯಾರ್, ವಲಯ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಮಮತಾ ಶೆಣೈ, ಕ್ಲಬ್ ಕಾರ್ಯದರ್ಶಿ ಹರೀಶ್ ಶೆಟ್ಟಿ ಡಿ, ಕೋಶಾಧಿಕಾರಿ ಓ.ಎ. ಕೃಷ್ಣ, ಅನಿತಾ ಹೇಮನಾಥ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು. ನಿಕಟಪೂರ್ವ ಕೋಶಾಧಿಕಾರಿ ಶ್ವೇತ ರವಿಕುಮಾರ್ ಕಾರ್ಯಕ್ರಮವನ್ನು ನಿರ್ವಹಿಸಿದರು.