Wednesday, April 24, 2024
spot_imgspot_img
spot_imgspot_img

ವಿಟ್ಲ ಲಯನ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

- Advertisement -G L Acharya panikkar
- Advertisement -

ವಿಟ್ಲ: ವಿಟ್ಲ ಲಯನ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ವಿಟ್ಲದ ಸಿಂಹಗಿರಿ ಲಯನ್ಸ್ ಭವನದಲ್ಲಿ ನಡೆಯಿತು.

ನೂತನ ಅಧ್ಯಕ್ಷ ಸುದೇಶ್ ಭಂಡಾರಿ ಎರ್ಮೆನಿಲೆ, ಕಾರ್ಯದರ್ಶಿ ಜಲಜಾಕ್ಷಿ ಬಾಲಕೃಷ್ಣ, ಕೋಶಾಧಿಕಾರಿ ರವಿಶಂಕರ್ ಅವರಿಗೆ ಲಯನ್ಸ್ ಕ್ಲಬ್ ಪ್ರಥಮ ಉಪರಾಜ್ಯಪಾಲ ಮೆಲ್ವಿನ್ ಡಿ ಸೋಜ ಪದಗ್ರಹಣ ನಡೆಸಿಕೊಟ್ಟರು. ಬಳಿಕ ಮಾತನಾಡಿದ ಅವರು ವಿಟ್ಲ ಲಯನ್ಸ್ ಕ್ಲಬ್ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇಡೀ ಜಿಲ್ಲೆಗೆ ವಿಟ್ಲ ಲಯನ್ಸ್ ಕ್ಲಬ್ ಮಾದರಿಯಾಗಿದೆ ಎಂದರು.

ವಿಟ್ಲ ಲಯನ್ಸ್ ಕ್ಲಬ್ ಗೆ ನೂತನವಾಗಿ ಬಬಿತಾ, ರಜತ್ ಆಳ್ವ, ಸಂಜಯ್, ಅರವಿಂದ ರೈ ಮೂರ್ಜೆಬೆಟ್ಟು, ಸೇರ್ಪಡೆಗೊಂಡರು. ಸ್ಥಾಪಕ ಸದಸ್ಯ ಸಿ.ವಿ ಗೋಪಾಲಕೃಷ್ಣ ಅವರನ್ನು ಸ್ಥಾಪಕ ದಿನಾಚರಣೆ ಪ್ರಯುಕ್ತ ಸನ್ಮಾನಿಸಲಾಯಿತು. ಪಿಯುಸಿ, ಎಸ್ಸೆಎಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ಧನ್ಯಶ್ರೀ ಮತ್ತು ಜೀವಿತಾ ಅವರನ್ನು ಸನ್ಮಾನಿಸಲಾಯಿತು. ಅನಾರೋಗ್ಯ ಪೀಡಿತ ಕಡಂಬು ಮತ್ತು ಎರ್ಮೆನಿಲೆ ಬಡಕುಟುಂಬಕ್ಕೆ ಸಹಾಯಧನ ವಿತರಿಸಲಾಯಿತು. ವಿಟ್ಲ ಪಿಸಿಯೋಥೆರಪಿ ಘಟಕಕ್ಕೆ ಕುರ್ಚಿ ವಿತರಿಸಲಾಯಿತು.

ಜಿಲ್ಲಾ ಮುಖ್ಯ ಕೋ ಆರ್ಡಿನೇಟರ್ ಎಚ್ ಎಂ ತಾರಾನಾಥ್, ನಿಕಟಪೂರ್ವಗವರ್ನರ್ ಡಾ. ಗೀತಾಪ್ರಕಾಶ್, ವಿಟ್ಲ ಲಯನ್ಸ್ ಕ್ಲಬ್ ನಿರ್ಗಮನ ಅಧ್ಯಕ್ಷ ಮೋನಪ್ಪ ಗೌಡ, ಕಾರ್ಯದರ್ಶಿ ಲೂಯಿಸ್ ಮಸ್ಕರೇಂಞಸ್, ಕೋಶಾಧಿಕಾರಿ ಗಂಗಾಧರ್, ಪ್ರಮುಖರಾದ ಮುರಳೀಧರ್ ಪ್ರಸಾದ್, ಲಿಯೋ ಕ್ಲಬ್ ಅಧ್ಯಕ್ಷೆ ಯುಕ್ತಾ ಡಿ.ಎಂ, ಕಾರ್ಯದರ್ಶಿ ವೈಭವಿ ಆಚಾರ್ಯ, ಕೋಶಾಧಿಕಾರಿ ಮೊಹಮ್ಮದ್ ಸಹಲಾನ್ ಉಪಸ್ಥಿತರಿದ್ದರು.

ಸಂತೋಷ್ ಕುಮಾರ್ ಶೆಟ್ಟಿ ಪೆಲತ್ತಡ್ಕ, ಪ್ರಭಾಕರ್ ಶೆಟ್ಟಿ ದಂಬೆಕಾನ, ಲಕ್ಷ್ಮಣ್, ಮಹಮ್ಮದ್ ಇಕ್ವಾಲ್ ಹಾನೇಸ್ಟ್, ಸಂತೋಷ್ ಕುಮಾರ್ ಶೆಟ್ಟಿ ಪೆಲ್ಲಡ್ಕ, ಡಾ.ಗಾಯತ್ರಿ ಗೀತಾಪ್ರಕಾಶ್, ಸಿಂಧು ಶೆಟ್ಟಿ ವಿವಿಧ ಜವಾಬ್ದಾರಿ ನಿರ್ವಹಿಸಿದರು.

- Advertisement -

Related news

error: Content is protected !!