- Advertisement -
- Advertisement -
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಹಾಗೂ ಲಯನ್ಸ್ ಕ್ಲಬ್ ಪುತ್ತೂರು ಪಾಣಾಜೆ ವ್ಯಾಪ್ತಿಗೆ ಜಿಲ್ಲಾ ಗವರ್ನರ್ ಸಂಜಿತ್ ಶೆಟ್ಟಿ ಪಿಎಂಜಿಎಫ್ ರವರು ಮಾರ್ಚ್ 29ನೇ ಬುಧವಾರ ಭೇಟಿ ನೀಡಲಿದ್ದಾರೆ.
ಬೆಳಗ್ಗೆ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಬಳಿಕ ಜೈನ ಬಸದಿಗೆ ತೆರಳಿ, ನಂತರ ಶಾಲೆಗಳಲ್ಲಿ ಕಂಪ್ಯೂಟರ್ ಹಾಗೂ ನಾಮಫಲಕ ವಿತರಣೆ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನದ ಬಳಿಕ 3 ಬಡಕುಟುಂಬಗಳ ಮನೆಗಳಿಗೆ ಲಯನ್ಸ್ ಜ್ಯೋತಿ ಉಚಿತ ವಿದ್ಯುತ್ ಸೌಕರ್ಯ ವಿತರಣೆ ಮಾಡಲಿದ್ದಾರೆ. ಬಳಿಕ ಸಂಜೆ 7ಗಂಟೆಗೆ ವಿಟ್ಲ ನೀರಕಣಿಯ ಜಿ. ಎಲ್ ಅಡಿಟೋರಿಯಂನಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ5 ಸಾಧಕರನ್ನು ಗುರುತಿಸಿ ಗೌರವಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸುವಂತೆ ಲಯನ್ಸ್ ಕ್ಲಬ್ ವಿಟ್ಲ ಸಿಟಿ ಅಧ್ಯಕ್ಷ ಸಂದೇಶ್ ಶೆಟ್ಟಿ, ಹಾಗೂ ಪಾಣಾಜೆ ಲಯನ್ಸ್ ಕ್ಲಬ್ ಅಧ್ಯಕ್ಷ ಮೊಹಮ್ಮದ್ ಕುಕ್ಕುವಳ್ಳಿ ಎಂಜೆಎಫ್ ವಿನಂತಿಸಿಕೊಂಡಿದ್ದಾರೆ.
- Advertisement -