Thursday, May 2, 2024
spot_imgspot_img
spot_imgspot_img

ವಿಟ್ಲ: ವಾರದ ಬೆಳಕು 5ನೇ ಸರಣಿ ಕಾರ್ಯಕ್ರಮ; “ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕಾಂಶಯುಕ್ತ ಆಹಾರದ ಅಗತ್ಯತೆ” ಬಗ್ಗೆ ಮಾಹಿತಿ

- Advertisement -G L Acharya panikkar
- Advertisement -

ವಿಟ್ಲ: ಸಮತೋಲಿತ ಪೌಷ್ಟಿಕಾಂಶಯುಕ್ತ ಆಹಾರ ಸೇವನೆಯಿಂದ ರೋಗ ಮುಕ್ತರಾಗಲು ಸಾಧ್ಯ. ಎ೦ದು ಸಜಿಪ ಮುನ್ನೂರು ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಹಾಗೂ ರಾಜ್ಯ ಶುಶ್ರೂಷಕಿ ಸಂಘದ ಉಪಾಧ್ಯಕ್ಷರಾಗಿರುವ ಸುಮನಾ ಕ್ರಾಸ್ತಾ ನುಡಿದರು.

ಇವರು ದಿನಾಂಕ 27.08.2022 ರಂದು ಸರಕಾರಿ ಪ್ರೌಢಶಾಲೆ ಮಾಣಿಲ ಇಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ನಡೆಯುತ್ತಿರುವ ವಾರದ ಬೆಳಕು ಇದರ 5ನೇ ಸರಣಿ ಕಾರ್ಯಕ್ರಮದಲ್ಲಿ “ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕಾಂಶಯುಕ್ತ ಆಹಾರದ ಅಗತ್ಯತೆ” ವಿಷಯವಾಗಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಾ ಮಕ್ಕಳಿಗೆ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ಸುರಕ್ಷಾಧಿಕಾರಿ ದೀಪಾ ಹಾಗೂ ಪೆರುವಾಯಿ ಪ್ರಾ. ಆ ಕೇಂದ್ರದ ಆರೋಗ್ಯ ಸುರಕ್ಷಾಧಿಕಾರಿ ಅಮಿತಾ ಇವರು ಭಾಗವಹಿಸಿ ಆರೋಗ್ಯ ಸಂಬಂಧಿತ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯರಾದ ನಡುಮನೆ ಮಹಾಬಲ ಭಟ್ ವಹಿಸಿ ಮಾರ್ಗದರ್ಶನ ನೀಡಿದರು. ವೇದಿಕೆಯಲ್ಲಿ ಎಸ್ ಡಿ ಎಂ ಸಿ ಸದಸ್ಯರಾದ ವಿಷ್ಣು ಕನ್ನಡಗುಳಿ . ಮುಖ್ಯ ಶಿಕ್ಷಕರಾದ ಶ್ರೀ ಸುಬ್ರಹ್ಮಣ್ಯ ಭಟ್ ಕೆ.ಜಿ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಉಮಾನಾಥ ರೈ ಮೇರಾವು ಉಪಸ್ಥಿತರಿದ್ದರು. ಶಿಕ್ಷಕ ವರ್ಗ ಹಾಗೂ ಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ವೀಕ್ಷಿತಾ ಎಲ್ಲರನ್ನೂ ಸ್ವಾಗತಿಸಿದರು. ರೂಪಶ್ರೀ ಕಾರ್ಯಕ್ರಮ ನಿರೂಪಿಸಿ, ರಕ್ಷಿತಾ ವಂದಿಸಿದರು.

- Advertisement -

Related news

error: Content is protected !!