- Advertisement -
- Advertisement -
ವಿಟ್ಲ: ಮಹಾತ್ಮ ಗಾಂಧಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆಯ ಶುಭ ಸಂದರ್ಭದಲ್ಲಿ ವಿಠಲ ಪ್ರೌಢಶಾಲೆಯ Interact Club ಮತ್ತು ವಿದ್ಯಾರ್ಥಿ ಕೌನ್ಸಿಲ್ ವತಿಯಿಂದ ಕನ್ಯಾನದ ಸೇವಾಧಾಮ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಅಲ್ಲಿನ ವೃದ್ಧರಿಗೆ ಹಣ್ಣು ಹಂಪಲು ಮತ್ತು ಸಿಹಿಯನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ವಿಠಲ ವಿದ್ಯಾಸಂಘದ ಆಡಳಿತ ಮಂಡಳಿಯ ಸದಸ್ಯರಾದ ಪದ್ಮಯ್ಯ ಗೌಡ ಹಾಗೂ ಭವಾನಿ ರೈ ಕೊಲ್ಯ ಮತ್ತು ಪ್ರೌಢಶಾಲಾ ಉಪಪ್ರಾಂಶುಪಾಲರಾದ ಕಿರಣ್ ಕುಮಾರ್ ಹಾಗೂ ಶಿಕ್ಷಕ ರಮೇಶ್ ಬಿ.ಕೆ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ 37 ವಿದ್ಯಾರ್ಥಿಗಳು ಭಾಗವಹಿಸಿ ವೃದ್ಧರೊಂದಿಗೆ ಮಾತನಾಡುತ್ತಾ ಉಭಯ ಕುಶಲೋಪರಿ ವಿಚಾರಿಸಿದರು. ರೋಟರಿ ಕ್ಲಬ್ ವಿಟ್ಲ ಮತ್ತು ಆಶ್ರಮದ ಪರಶುರಾಮ ಸಹಕಾರದಿಂದ ಕಾರ್ಯಕ್ರಮ ಅರ್ಥ ಪೂರ್ಣವಾಗಿ ಮೂಡಿಬಂತು.
- Advertisement -