- Advertisement -
- Advertisement -

ವಿಟ್ಲ: ವಿಠ್ಠಲ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕಾಲೇಜಿನ ಹಿರಿಯ ವಿದ್ಯಾರ್ಥಿ ಗಾಯಕ ಹಾಗೂ ರಂಗ ಭೂಮಿ ಕಲಾವಿದ ಚಂದ್ರಶೇಖರ್ ಮಂಗಳೂರು ಇವರನ್ನು ಸನ್ಮಾನಿಸಲಾಯಿತು. ವಿಟ್ಠಲ ವಿದ್ಯಾ ಸಂಘದ ಕೋಶಾಧಿಕಾರಿ ಬಾಬು ಕೊಪ್ಪಳ, ಸದಸ್ಯ ನಿತ್ಯಾನಂದ ನಾಯಕ್, ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ಆಶಾ, ಚಂದ್ರಕಾಂತ, ಉಪನ್ಯಾಸಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.


- Advertisement -