Tuesday, March 19, 2024
spot_imgspot_img
spot_imgspot_img

ವಿಟ್ಲ: ವಿವಿಧ ಪೊಲೀಸ್ ಠಾಣೆಗಳ ಸಿಬ್ಬಂದಿಗಳ ವರ್ಗಾವಣೆ; ವಿಟ್ಲ ಪೊಲೀಸ್‌ ಠಾಣೆಯಲ್ಲಿ ಹೆಚ್ಚಲಿದೆ ಖಾಕಿ ಪಡೆ

- Advertisement -G L Acharya panikkar
- Advertisement -

ವಿಟ್ಲ: ದಕ್ಷಿಣ-ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಎಸ್ಐ, ಹೆಡ್‌ಕಾನ್ಸ್‌ಟೇಬಲ್‌ಗಳು ಮತ್ತು ಕಾನ್ಸ್‌ಟೇಬಲ್ ಹುದ್ದೆಗಳನ್ನು ಪುನರ್ ಸಂಘಟಿಸಿ, ಮರು ಹಂಚಿಕೆಯಾಗಿರುವ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಹಂಚಿಕೆ ಮಾಡಿ ವರ್ಗಾವಣೆಗೊಳಿಸಿ ಸ್ಥಳ ನಿಯುಕ್ತಿಗೊಳಿಸಲಾಗಿದೆ.

ಸುಳ್ಯ ಠಾಣೆಯ ಎಎಸ್ಐ ಶಿವರಾಮ ಅವರನ್ನು ವಿಟ್ಲ ಠಾಣೆಗೆ ವರ್ಗಾವಣೆಗೊಳಿಸಲಾಗಿದೆ. ಇನ್ನು ಬಂಟ್ವಾಳ ಗ್ರಾಮಾಂತರ ಠಾಣೆಯ ಸುರೇಶ್ ಗೌಡರನ್ನು ವಿಟ್ಲ ಠಾಣೆಗೆ, ಬಂಟ್ವಾಳ ಸಂಚಾರ ಠಾಣೆಯ ಕೆ.ಉದಯ ರೈ ಅವರನ್ನು ವಿಟ್ಲ ಪೊಲೀಸ್ ಠಾಣೆಗೆ, ಸುಳ್ಯ ಪೊಲೀಸ್ ಠಾಣೆಯ ಕರುಣಾಕರ ಅವರನ್ನು ವಿಟ್ಲ ಪೊಲೀಸ್ ಠಾಣೆಗೆ, ಬೆಳ್ಳಾರೆ ಠಾಣೆಯ ಮೋಹನ ಟಿ.ಅವರನ್ನು ವಿಟ್ಲ ಠಾಣೆಗೆ, , ಪುತ್ತೂರು ನಗರ ಠಾಣೆಯ ಶ್ರೀಧರ ಅವರನ್ನು ವಿಟ್ಲ ಠಾಣೆಗೆ, ಮಹಿಳಾ ಪೊಲೀಸ್ ಠಾಣೆಯ ಚಿತ್ರಲೇಖ ವಿಟ್ಲ ಠಾಣೆಗೆ ವರ್ಗಾವಣೆಗೊಳಿಸಲಾಗಿದೆ.

ಪರಶುರಾಮ ಲಮಾಣಿ ವಿಟ್ಲ ಪೊಲೀಸ್ ಠಾಣೆಗೆ, ಬಂಟ್ವಾಳ ಗ್ರಾಮಾಂತರ ಠಾಣೆಯ ಸತೀಶ್ ವಿಟ್ಲ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಸಂಬಂಧಪಟ್ಟ ಪಿಎಸ್ಐರವರುಗಳು ಸ್ಥಳ ನಿಯುಕ್ತಿಗೊಂಡ ಸಿಬ್ಬಂದಿಗಳನ್ನು ಕೂಡಲೇ ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಆದೇಶದಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!