- Advertisement -
- Advertisement -
ವಿಟ್ಲ: ವಿಶ್ವ ಹಿಂದೂ ಪರಿಷತ್ ಆಶ್ರಯದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವಿಟ್ಲ ಅಧ್ಯಕ್ಷರಾಗಿ ಗೋಪಾಲಕೃಷ್ಣ ಶೆಟ್ಟಿ ಇವರು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಹರೀಶ್ ಕೆ ವಿಟ್ಲ, ಕೋಶಾಧಿಕಾರಿಯಾಗಿ ರೋಹಿತ್ ಕಟ್ಟೆ ಹಾಗೆ ಇನ್ನಿತರ ಪದಾಧಿಕಾರಿಗಳ ಆಯ್ಕೆಯು ಇತ್ತೀಚಿನ ನಡೆದ ಸಭೆಯಲ್ಲಿ ನಡೆಯಿತು.
ಸಾರ್ವಜನಿಕ ಗಣೇಶೋತ್ಸವದ ಈ ವರ್ಷದ ಕಾರ್ಯಕ್ರಮವು ಆಗಸ್ಟ್ 31 ರಿಂದ ಸೆಪ್ಟೆಂಬರ್ 2ರವರೆಗೆ ಶ್ರೀ ಅನಂತೇಶ್ವರ ದೇವಸ್ಥಾನದ ಅನಂತ ಸದನದಲ್ಲಿ ವಿಜೃಂಭಣೆಯಿಂದ ನೆರವೇರಲಿರುವುದು. ಸೆಪ್ಟೆಂಬರ್ 2ರಂದು ಮಧ್ಯಾಹ್ನ 2:30 ಗಂಟೆಗೆ ಸರಿಯಾಗಿ ಶ್ರೀ ಮಹಾಗಣಪತಿಯ ವೈಭವದ ಶೋಭಾ ಯಾತ್ರೆ ಪ್ರಮುಖ ಬೀದಿಗಳಲ್ಲಿ ನಡೆಯಲಿರುವುದು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಹಾಗಣಪತಿಯ ಕೃಪೆಗೆ ಪಾತ್ರರಾಗಬೇಕಾಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ.
- Advertisement -