Saturday, April 20, 2024
spot_imgspot_img
spot_imgspot_img

ವಿಟ್ಲ: ಶ್ರೀವರ ಯುವಕ ಮಂಡಲ (ರಿ) ಪೂರ್ಲಪ್ಪಾಡಿ ವಿಟ್ಲಪಡ್ನೂರು ಇದರ ನೂತನ ಯುವಕ ಮಂಡಲದ ಪದಗ್ರಹಣ

- Advertisement -G L Acharya panikkar
- Advertisement -

ವಿಟ್ಲ: ಶ್ರೀವರ ಯುವಕ ಮಂಡಲ (ರಿ) ಪೂರ್ಲಪ್ಪಾಡಿ ವಿಟ್ಲಪಡ್ನೂರು ಇದರ ನೂತನ ಯುವಕ ಮಂಡಲದ ಪದಗ್ರಹಣ ಕಾರ್ಯಕ್ರಮ ಮಾ.6 ರಂದು ಅಂಗನವಾಡಿ ವಠಾರ ವೊರ್ಲಪ್ಪಾಡಿಯಲ್ಲಿ ಜರುಗಿತು.

ಯುವಕ ಮಂಡಲದ ವತಿಯಿಂದ ಬೃಹತ್ ರಕ್ತದಾನ ಶಿಬಿರ, ಉಚಿತ ಮಧುಮೇಹ, ರಕ್ತದೊತ್ತಡ ಮತ್ತು ರಕ್ತದ ಗುಂಪು ಪರೀಕ್ಷೆ ಅಲ್ಲದೇ ಉಚಿತ ಇ ಶ್ರಮ್ ಕಾರ್ಡ್, ಅಯುಷ್ಮಾನ್ ಕಾರ್ಡ್ ನೋಂದಣಿ ಹಾಗೂ ವಿತರಣೆ, ಪುಧಾನಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಹಾಗೂ ಸಭಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಟ್ಲಪಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಷ್ಮಾಶಂಕರಿ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ನಿಕಟಪೂರ್ವ ಜಿಲ್ಲಾ ಲಯನ್ಸ್ ಗವರ್ನರ್ ಡಾ. ಗೀತಾಪ್ರಕಾಶ್ ಎ ನೆರವೇರಿಸಿದರು.

ಅಥಿತಿಗಳಾಗಿ ವಿಟ್ಲಪಡ್ನೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರವೀಶ್ ಶೆಟ್ಟಿ ಕರ್ಕಳ, ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಉಪಾಧ್ಯಾಕ್ಷ ನಾಗೇಶ್ ಶೆಟ್ಟಿ, ಕೊಡಂಗಾಯಿ, ಮಲರಾಯಿ ದೈವಸ್ಥಾನ ಸೇವಾ ಟ್ರಸ್ಟ್ (ರಿ)ಪೂರ್ಲಪ್ಪಾಡಿ ಇದರ ಅಧ್ಯಕ್ಷ ರಾಮಣ್ಣ ಗೌಡ ದೇವರಮನೆ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಧರ್ಮಾವತಿ ದೇವರಮನೆ, ಲೋಕೋಪಯೋಗಿ ಇಲಾಖೆ ಗುತ್ತಿಗೆದಾರ ಸಂಜೀವ ಪೂಜಾರಿ ಎನ್, ಶ್ರೀವರ ಯುವಕ ಮಂಡಲದ ಗೌರವಾಧ್ಯಕ್ಷ ಈಶ್ವರಭಟ್ ವಿ, ಶ್ರೀವರ ಯುವಕ ಮಂಡಲದ ಅಧ್ಯಕ್ಷ ಜಯಂತ್ ಪೂರ್ಲಪ್ಪಾಡಿ, ವಿಟ್ಲಪಡ್ನೂರು ಗ್ರಾಮ ಪಂಚಾಯತ್‌ನ ಸದಸ್ಯೆ ಜಯಲಕ್ಷ್ಮಿ .ಕೆ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದಲ್ಲಿ ಊರಿನ ಇಬ್ಬರು ಸಾಧಕರಿಗೆ ಸನ್ಮಾನ ಮಾಡಲಾಯಿತು. ಸುಜಾತ ಎ ಹಾಗೂ ಆಟೋ ಚಾಲಕ ವೃತ್ತಿಯ ರಮೇಶ್ ಪೂಜಾರಿರವರಿಗೆ ಸನ್ಮಾನ ಮಾಡಲಾಯಿತು. ಸಭೆಯಲ್ಲಿ ಶ್ರೀವರ ಯುವಕ ಮಂಡಲದ ಲಾಂಛನವನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮಾಳವಿ, ಗೌತಮಿ, ಯಶಸ್ವಿನಿ ಪ್ರಾರ್ಥನೆ ಮಾಡಿದರು. ಜಯಂತ್ ಪ್ರಾಸ್ತಾವಿಕ ಮತ್ತು ಸ್ವಾಗತಿಸಿದರು. ಹರೀಶ್ ವಿಟ್ಲ ಕಾರ್ಯಕ್ರಮ ನಿರೂಪಿಸಿದರು. ಕುಸಲ್ದ ಗುರಿಕಾರ ದಿನೇಶ್ ಕೋಡಪದವು ಸಾರಥ್ಯದಲ್ಲಿ ಯಕ್ಷ-ಹಾಸ್ಯ-ವೈಭವ ಕಾರ್ಯಕ್ರಮ ನಡೆಯಿತು.

- Advertisement -

Related news

error: Content is protected !!