ವಿಟ್ಲ: ಶ್ರೀ ಚಂದ್ರನಾಥ ಸ್ವಾಮಿ ಬಸದಿ ವಿಟ್ಲ ಇದರ ಪುನಾರ್ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರವು ಇಂದು(ಅ.05) ಭಾರತಭೂಷಣ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಶ್ರೀ ಜೈನ ಮಠ, ಮೂಡಬಿದಿರೆ ಇವರ ಉಪಸ್ಥಿತಿಯಲ್ಲಿ ಹಾಗೂ ಮಾರ್ಗದರ್ಶನದಲ್ಲಿ ನೇರವೇರಿತು.
ವಿಟ್ಲ ಪಂಚಲಿ0ಗೇಶ್ವರ ದೇವಸ್ಥಾನದಿಂದ ಮೆರವಣಿಗೆಯೊಂದಿಗೆ ಪರಮಪೂಜ್ಯ ಸ್ವಾಮೀಜಿಯವರ ಸ್ವಾಗತ ಮಾಡಲಾಯಿತು. ಈ ಭವ್ಯ ಮೆರವಣಿಗೆಯಲ್ಲಿ ನೂರಾರು ಜನರು ಹಾಗೂ ಹಲವು ಗಣ್ಯರು ಪಾಲ್ಗೊಂಡಿದ್ದರು.
ಶ್ರೀ ಚಂದ್ರನಾಥ ಸ್ವಾಮಿ ಬಸದಿ ಇದರ ಪುನಾರ್ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರವು ಹಲವು ಗಣ್ಯರ ಉಪಸ್ಥಿತಿಯಲ್ಲಿ ನಡೆದ ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮವು ಭಾರತಭೂಷಣ ಸ್ವ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಶ್ರೀ ಜೈನ ಮಠ, ಮೂಡಬಿದಿರೆ ಹಾಗೂ ಮಾಣಿಲ ಶ್ರೀ ಮಹಾಲಕ್ಷೀ್ಮ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಉಪಸ್ಥಿತಿಯಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಪುತ್ತೂರು ಶಾಸಕ ಸಂಜೀವ ಮಠಂದೂರು, ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಸುರೇಂದ್ರ ಕುಮಾರ್ ಹಾಗೂ ಡಿ.ಹರ್ಷೇಂದ್ರ ಕುಮಾರ್ ಮತ್ತು ವಿಟ್ಲ ಅರಮನೆಯ ಬಂಗಾರು ಅರಸರು ಆಗಮಿಸಿದ್ದರು. ವೇದಿಕೆಯಲ್ಲಿ ಶ್ರೀ ಚಂದ್ರನಾಥ ಸ್ವಾಮಿ ಬಸದಿ ವಿಟ್ಲ ಇದರ ಕಾರ್ಯಾಧ್ಯಕ್ಷ ಜೀತೆಶ್ ಕುಮಾರ್ ಉಪಸ್ಥಿತರಿದ್ದರು.