ವಿಟ್ಲ: ವೈಯಕ್ತಿಕ ವಿಚಾರದಲ್ಲಿ ತಂಡಗಳ ನಡುವೆ ಸಾಲೆತ್ತೂರಿನ ಅಗರಿಯಲ್ಲಿ ಮಾರಾಮಾರಿ ನಡೆದು ಇಬ್ಬರು ಗಾಯಗೊಂಡ ಘಟನೆ ನಡೆದಿತ್ತು. ಈ ಬಗ್ಗೆ ಇತ್ತಂಡಗಳೂ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಒಟ್ಟು ೧೯ ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ವಿಟ್ಲ ಪೊಲೀಸರು ವಶಕ್ಕೆ ಪಡದುಕೊಂಡಿದ್ದಾರೆ. ಶಶಿಕುಮಾರ್ ಎಂಬಾತನನ್ನು ಇನ್ಸ್ ಪೆಕ್ಟರ್ ನಾಗರಾಜ್ ಎಚ್ ನೇತೃತ್ವದ ತಂಡ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದೆ. ಬಜರಂಗದಳ ವಿಟ್ಲ ಪ್ರಖಂಡ ಸಂಚಾಲಕ ಚಂದ್ರಹಾಸ ಕನ್ಯಾನ ಹಾಗೂ ಸುರತ್ಕಲ್ ಕೃಷ್ಣಾಪುರ ನಿವಾಸಿ ಪ್ರಶಾಂತ್ ಎಂಬವರಿಗೆ ಗಾಯಗಳಾಗಿದೆ.
ಚಂದ್ರಹಾಸ ಕನ್ಯಾನ ಅವರ ತಲೆಗೆ ಏಟಾಗಿದ್ದು, ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಶಾಂತ್ ಸುರತ್ಕರ್ ಬೆನ್ನಿಗೆ ಏಟಾಗಿದ್ದು, ಮಂಗಳೂರು ಖಾಸಗೀ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಂಡಗಳ ನಡುವಿನ ದ್ವೇಷಯಿದೆ ಎಂದು ಹೇಳಲಾಗುತ್ತಿದೆಯಾದರೂ, ಹಣದ ವಿಚಾರದಲ್ಲಿ ಈ ದಾಳಿ ನಡೆದಿದೆ ಎಂಬ ಮಾಹಿತಿಯಿದೆ. ವಿಟ್ಲ ಪೊಲೀಸರಿಂದ ತನಿಖೆ ನಡೆಯುತ್ತಿದೆ.