- Advertisement -
- Advertisement -


ವಿಟ್ಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ಜಲಾವೃತವಾದ ಘಟನೆ ನಡೆದಿದೆ. ನೀರಿನ ಮಟ್ಟ ಏರಿಕೆಯಾಗುತ್ತಿರು ಹಿನ್ನೆಲೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ.

ವಿಟ್ಲ-ಸಾಲೆತ್ತೂರು ರಸ್ತೆಯ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ಬದಿಯಲ್ಲಿ ಹರಿಯುತ್ತಿರುವ ಹೊಳೆಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ರಸ್ತೆ ಜಲಾವೃತವಾಗಿದೆ. ಇದರಿಂದಾಗಿ ಈ ದಾರಿಯಾಗಿ ವಾಹನ ಸಂಚಾರಕ್ಕೆ ತೊಡಕಾಗಿದ್ದು, ವಾಹನಗಳು ಸುತ್ತಿ ಬಳಸಿ ಪ್ರಯಾಣ ಬೆಳೆಸುವಂತಾಗಿದೆ.

ಬೆಳಗ್ಗಿನಿಂದಲೇ ನೀರಿನ ಮಟ್ಟ ಏರುತ್ತಿದ್ದು, ಅಲ್ಪ ಹೊತ್ತು ಇಳಿಮುಖವಾಗಿತ್ತು. ಇದೀಗ ಮತ್ತೆ ಏರಿಕೆ ಕಂಡಿದ್ದು ನೀರು ರಸ್ತೆಗೆ ಬಂದಿದೆ. ಇದೀಗ ರಸ್ತೆಯ ಎರಡೂ ಕಡೆಗಳಲ್ಲಿ ಸ್ಥಳೀಯ ನಾಗರೀಕರು ಕಾವಲು ಕಾಯುತ್ತಿದ್ದು ಅಪಾಯ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುತ್ತಿದ್ದಾರೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
- ವಿಟ್ಲ ಗ್ರಾಮೀಣ ಸಹಕಾರಿ ಸಂಘದಲ್ಲಿ ಉದ್ಯೋಗಾವಕಾಶ: ದ್ವಿತೀಯ ದರ್ಜೆ ಸಹಾಯಕ ಹಾಗೂ ಜವಾನ ಸೇರಿ 5 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
- ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಪರಿಚಯ: ₹87.22 ಲಕ್ಷ ವಂಚನೆ; ಬೆಳ್ತಂಗಡಿಯಲ್ಲಿ ಪ್ರಕರಣ ದಾಖಲು
- ಪುತ್ತೂರು ತಾಲೂಕು ಇಂಟೆಕ್ ನೂತನ ಪದಾಧಿಕಾರಿಗಳ ನೇಮಕ: ಅಧ್ಯಕ್ಷರಾಗಿ ಅಜೀಮ್ ಬನ್ನೂರು
- ಅತ್ಯುತ್ತಮ ಸೇವೆಗೆ ಮಂಗಳೂರು ನಗರ ಪೊಲೀಸ್ ಸಿಬ್ಬಂದಿಗೆ ಗೌರವ: 29 ಅಧಿಕಾರಿಗಳು, 118 ಸಿಬ್ಬಂದಿಗೆ ಪ್ರಶಂಸನಾ ಪತ್ರ ಹಾಗೂ ನಗದು ಬಹುಮಾನ
- ವಿವಾಹಿತೆ ಸಾವಿನ ಪ್ರಕರಣ: ಪತಿ ಮನೆಯ ಮೂವರ ವಿರುದ್ಧ ಕೊಲೆ ಆರೋಪದಡಿ ಪ್ರಕರಣ ದಾಖಲು



- Advertisement -








