- Advertisement -
- Advertisement -


ವಿಟ್ಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ಜಲಾವೃತವಾದ ಘಟನೆ ನಡೆದಿದೆ. ನೀರಿನ ಮಟ್ಟ ಏರಿಕೆಯಾಗುತ್ತಿರು ಹಿನ್ನೆಲೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ.

ವಿಟ್ಲ-ಸಾಲೆತ್ತೂರು ರಸ್ತೆಯ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ಬದಿಯಲ್ಲಿ ಹರಿಯುತ್ತಿರುವ ಹೊಳೆಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ರಸ್ತೆ ಜಲಾವೃತವಾಗಿದೆ. ಇದರಿಂದಾಗಿ ಈ ದಾರಿಯಾಗಿ ವಾಹನ ಸಂಚಾರಕ್ಕೆ ತೊಡಕಾಗಿದ್ದು, ವಾಹನಗಳು ಸುತ್ತಿ ಬಳಸಿ ಪ್ರಯಾಣ ಬೆಳೆಸುವಂತಾಗಿದೆ.

ಬೆಳಗ್ಗಿನಿಂದಲೇ ನೀರಿನ ಮಟ್ಟ ಏರುತ್ತಿದ್ದು, ಅಲ್ಪ ಹೊತ್ತು ಇಳಿಮುಖವಾಗಿತ್ತು. ಇದೀಗ ಮತ್ತೆ ಏರಿಕೆ ಕಂಡಿದ್ದು ನೀರು ರಸ್ತೆಗೆ ಬಂದಿದೆ. ಇದೀಗ ರಸ್ತೆಯ ಎರಡೂ ಕಡೆಗಳಲ್ಲಿ ಸ್ಥಳೀಯ ನಾಗರೀಕರು ಕಾವಲು ಕಾಯುತ್ತಿದ್ದು ಅಪಾಯ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುತ್ತಿದ್ದಾರೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
- ಬೆಂಗಳೂರು: ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯ ಬಂಧನ
- ಸೌರಶಕ್ತಿಯಲ್ಲಿ ಅಮೆರಿಕಾವನ್ನೇ ಮೀರಿಸಿ, ಜಾಗತಿಕವಾಗಿ 2ನೇ ಸ್ಥಾನಕ್ಕೇರಿದ ಭಾರತ – ಪ್ರಹ್ಲಾದ್ ಜೋಶಿ
- ನೆಹರು ದಾಖಲೆ ಮುರಿದು ಹೊಸ ಇತಿಹಾಸ ಸೃಷ್ಟಿಸಲು ಮುಂದಾದ ಪ್ರಧಾನಿ ಮೋದಿ!
- ಮಧ್ಯಪ್ರದೇಶ: ಗೋಡೆಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು – ಕೂದಲೆಳೆ ಅಂತರದಲ್ಲಿ ಪಾರಾದ ಶಾಸಕ ಯೋಗೇಂದ್ರ ಸಿಂಗ್ ಬಾಬಾ
- ಕಲಬುರಗಿ: ಕಾರಿನೊಳಗೆ ಉಸಿರುಗಟ್ಟಿ 3 ವರ್ಷದ ಮಗು ಸಾವು



- Advertisement -








