- Advertisement -
- Advertisement -
ವಿಟ್ಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ಜಲಾವೃತವಾದ ಘಟನೆ ನಡೆದಿದೆ. ನೀರಿನ ಮಟ್ಟ ಏರಿಕೆಯಾಗುತ್ತಿರು ಹಿನ್ನೆಲೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ.
ವಿಟ್ಲ-ಸಾಲೆತ್ತೂರು ರಸ್ತೆಯ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ಬದಿಯಲ್ಲಿ ಹರಿಯುತ್ತಿರುವ ಹೊಳೆಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ರಸ್ತೆ ಜಲಾವೃತವಾಗಿದೆ. ಇದರಿಂದಾಗಿ ಈ ದಾರಿಯಾಗಿ ವಾಹನ ಸಂಚಾರಕ್ಕೆ ತೊಡಕಾಗಿದ್ದು, ವಾಹನಗಳು ಸುತ್ತಿ ಬಳಸಿ ಪ್ರಯಾಣ ಬೆಳೆಸುವಂತಾಗಿದೆ.
ಬೆಳಗ್ಗಿನಿಂದಲೇ ನೀರಿನ ಮಟ್ಟ ಏರುತ್ತಿದ್ದು, ಅಲ್ಪ ಹೊತ್ತು ಇಳಿಮುಖವಾಗಿತ್ತು. ಇದೀಗ ಮತ್ತೆ ಏರಿಕೆ ಕಂಡಿದ್ದು ನೀರು ರಸ್ತೆಗೆ ಬಂದಿದೆ. ಇದೀಗ ರಸ್ತೆಯ ಎರಡೂ ಕಡೆಗಳಲ್ಲಿ ಸ್ಥಳೀಯ ನಾಗರೀಕರು ಕಾವಲು ಕಾಯುತ್ತಿದ್ದು ಅಪಾಯ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುತ್ತಿದ್ದಾರೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
- ವಿಟ್ಲ: ಉಕ್ಕುಡ-ದರ್ಬೆ ಭಾಗದಲ್ಲಿ ನೀರಿಗಾಗಿ ಪರದಾಟ: ಪ.ಪಂ ವಿರುದ್ಧ ಗ್ರಾಮಸ್ಥರು ಆಕ್ರೋಶ..!
- ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ಗೆ ಡಿಕ್ಕಿ ಹೊಡೆದ ಕಾರು..!
- ಬಂಟ್ವಾಳ : ಕೂಲಿ ಹಣ ಕೇಳಿದ್ದಕ್ಕೆ ಕಾರ್ಮಿಕನಿಗೆ ಜಾತಿ ನಿಂದನೆಗೈದು ಹಲ್ಲೆ : ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು
- ಬೇಸಿಗೆಯಲ್ಲಿ ಅತೀಯಾಗಿ ಬೆವರುವುದನ್ನು ಹೇಗೆ ನಿಯಂತ್ರಿಸುವುದು
- ಬೆಂಗಳೂರು ಮಾಜಿ ಕಮೀಷನರ್ ಭಾಸ್ಕರ್ ರಾವ್ ಕಾರ್ಗೆ ಭೀಕರ ಅಪಘಾತ
- Advertisement -